Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:8 - ಕನ್ನಡ ಸತ್ಯವೇದವು C.L. Bible (BSI)

8 ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾರು ಸ್ವೇಚ್ಫೆಯುಳ್ಳವರಾಗಿ ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ ಅವರಿಗೆ ಕೋಪ ರೌದ್ರಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ತ್ಯಾ ಹುರಲ್ಲ್ಯಾ ಚುಕ್ ಅಸಲ್ಲೆ ಕರುಸಾಟ್ನಿ, ಸ್ವಾರ್ಥಾನ್ ಬರೆ ಅಸಲ್ಲೆ ಸೊಡುನ್ ಸೊಡ್ತಲ್ಯಾ ಲೊಕಾಂಚ್ಯಾ ವರ್‍ತಿ ದೆವ್ ಅಪ್ನಾಚೊ ಮೊಟೊ ರಾಗ್ ಅನಿ ಆರ್ಬಾಟ್ ವೊತ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:8
34 ತಿಳಿವುಗಳ ಹೋಲಿಕೆ  

ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಹುರುಳಿಲ್ಲದ ತರ್ಕಗಳಿಂದಲೂ ಉದ್ದುದ್ದ ವಂಶಾವಳಿಗಳಿಂದಲೂ ಕಲಹ ಕಚ್ಚಾಟಗಳಿಂದಲೂ ಧರ್ಮಶಾಸ್ತ್ರವನ್ನು ಕುರಿತಾದ ವಾಗ್ವಾದಗಳಿಂದಲೂ ನೀನು ದೂರವಿರು. ಅವು ನಿಷ್ಪ್ರಯೋಜಕ ಹಾಗೂ ವ್ಯರ್ಥವಾದುವು.


ಇದರ ಬಗ್ಗೆ ಯಾರಾದರೂ ತರ್ಕಿಸಿದರೆ ಅಂಥವನಿಗೆ ಇದು ತಿಳಿದಿರಲಿ: ಇಂಥ ಪದ್ಧತಿ ನಮ್ಮಲ್ಲಿ ಇಲ್ಲ: ಇನ್ನಾವ ಧರ್ಮಸಭೆಗಳಲ್ಲೂ ಇಲ್ಲ.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.


ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಮಾನವರ ಎಲ್ಲಾ ಪಾಪಾಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ.


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ನೀವು ಪರಲೋಕದಿಂದ ಅದನ್ನು ಕೇಳಿ ನಿಮ್ಮ ಭಕ್ತರ ವ್ಯಾಜ್ಯವನ್ನು ತೀರಿಸಿರಿ. ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ, ಅವನು ನೀತಿವಂತನೆಂದು ತೋರಿಸಿಕೊಡಿ.


ಸಜ್ಜನರ ಕೋರಿಕೆ ಕಲ್ಯಾಣ ಸಾಧಕ; ದುರ್ಜನರ ನಿರೀಕ್ಷೆ ಕೋಪಾಗ್ನಿ ಸಾಧಕ.


ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಒಡಂಬಡಿಕೆಯನ್ನು ಮೀರಿದವರಿಗೆ ಇಬ್ಭಾಗವಾಗಿ ಸೀಳಿದ ಕರುವಿನ ಗತಿ ಬರುವಂತೆ ಮಾಡುವೆನು.


ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ಆ ಕೆಲವರಾದರೋ ಸ್ವಾರ್ಥಸಾಧನೆಗಾಗಿಯೇ ಹೊರತು ಪ್ರಾಮಾಣಿಕರಾಗಿ ಕ್ರಿಸ್ತಯೇಸುವನ್ನು ಸಾರುತ್ತಿಲ್ಲ. ಸೆರೆಯಲ್ಲಿರುವ ನನ್ನನ್ನು ಇನ್ನೂ ಹೆಚ್ಚಿನ ಕಷ್ಟಕ್ಕೆ ಗುರಿಮಾಡಬೇಕೆಂಬುದೇ ಅವರ ಉದ್ದೇಶ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ಇರುವ ಕಡೆಗಳಲ್ಲೆಲ್ಲಾ ನಾನಾವಿಧವಾದ ಅಕ್ರಮಗಳೂ ದುಶ್ಚಟಗಳು ಇರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು