Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:28 - ಕನ್ನಡ ಸತ್ಯವೇದವು C.L. Bible (BSI)

28 ಮಾನವನಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಧರ್ಮಪ್ರಮಾಣಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬದಾಗಿ ನಿಶ್ಚಯ ಮಾಡಿಕೊಂಡಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಆಕ್ರಿಕ್ ಮಿಯಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಅಶೆ ಖಾಯ್ದ್ಯಾತ್ನಿ ಕಾಯ್ ಹಾಯ್ ತೆ ಸಗ್ಳೆ ಪಾಳಲ್ಲ್ಯಾ ವೈನಾ ನ್ಹಯ್, ಖಾಲಿ ವಿಶ್ವಾಸಾಚ್ಯಾ ವೈನಾ ಎವ್ಡೆಚ್ ಎಕ್ ಮಾನುಸ್ ನಿತಿವಂತ್ ಮನುನ್ ಠರ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:28
20 ತಿಳಿವುಗಳ ಹೋಲಿಕೆ  

ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.


ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.


ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತಯೇಸು ಬರುವತನಕ ಅದು ನಮಗೆ ಕಾವಲಾಗಿತ್ತು.


ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು.


ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುವುದು ವಿಶ್ವಾಸದಿಂದ ಮಾತ್ರವಲ್ಲ, ವಿಶ್ವಾಸವು ಸತ್ಕ್ರಿಯೆಗಳೊಡನೆ ಬೆರೆತಾಗ ಮಾತ್ರ ಎಂಬುದು ನಿಮಗೆ ತಿಳಿದಿರಲಿ.


ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು, ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


ಇದು ಮಾನವರ ಪುಣ್ಯಕಾರ್ಯಗಳ ಪರಿಣಾಮವೂ ಅಲ್ಲ. ಆದುದರಿಂದ ಯಾರೂ ಹೆಮ್ಮೆಪಡಲು ಆಸ್ಪದವಿಲ್ಲ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು.


ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು