Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:1 - ಕನ್ನಡ ಸತ್ಯವೇದವು C.L. Bible (BSI)

1 ಹಾಗಾದರೆ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಏನು ಪಡಕೊಂಡನೆಂದು ಹೇಳಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹಾಗಾದರೆ, ನಮ್ಮ ಪಿತೃವಾದ ಅಬ್ರಹಾಮನ ಬಗ್ಗೆ ನಾವು ಏನು ಹೇಳೋಣ? ಅವನು ನಂಬಿಕೆಯ ಬಗ್ಗೆ ಏನು ಕಲಿತುಕೊಂಡನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಾಗಾದರೆ ವಂಶಾನುಕ್ರಮವಾಗಿ ನಮ್ಮ ಮೂಲ ಪಿತೃವಾಗಿರುವ ಅಬ್ರಹಾಮನು, ಈ ವಿಷಯದಲ್ಲಿ ಏನು ಕಂಡುಕೊಂಡನೆಂದು ಹೇಳಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಹೊಲ್ಯಾರ್ ಅಮ್ಚ್ಯಾ ಕುಳಿಚ್ಯಾ ಬಾಬಾ ಅಬ್ರಾಹಾಮಾಚ್ಯಾ ವಿಶಯಾತ್ ಅಮಿ ಕಾಯ್ ಮನುಕ್ ಹೊತಾ? ವಿಶ್ವಾಸಾಚ್ಯಾ ವಿಶಯಾತ್ ತೆಚೊ ಅನ್ಬೊಗ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:1
18 ತಿಳಿವುಗಳ ಹೋಲಿಕೆ  

ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರಕೊಟ್ಟರು.


ಹಾಗಾದರೆ ಧರ್ಮಶಾಸ್ತ್ರವೇ ಪಾಪ ಎಂದು ಹೇಳೋಣವೆ? ಖಂಡಿತವಾಗಿ ಇಲ್ಲ. ಧರ್ಮಶಾಸ್ತ್ರ ಇಲ್ಲದಿದ್ದರೆ ಪಾಪದ ಅರಿವು ನನಗಾಗುತ್ತಿರಲಿಲ್ಲ. ‘ದುರಾಶೆಪಡಬೇಡ’ ಎಂದು ಧರ್ಮಶಾಸ್ತ್ರ ವಿಧಿಸದೆಹೋಗಿದ್ದರೆ ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ.


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಠನೋ? ಆತನೂ ಸಾವಿಗೀಡಾದನು. ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು.


ಅದಕ್ಕೆ ಯೆಹೂದ್ಯರು, “ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.


ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಹಾಗಾದರೆ ನಾವು ಏನು ಹೇಳೋಣ? ದೈವಾನುಗ್ರಹವು ಹೆಚ್ಚುವಂತೆ ನಾವು ಪಾಪದಲ್ಲೇ ನೆಲೆಗೊಂಡು ಇರೋಣವೇ?


ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.


ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು