Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:17 - ಕನ್ನಡ ಸತ್ಯವೇದವು C.L. Bible (BSI)

17 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇವಿುಸಿದ್ದೇನೆಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಅಬ್ರಹಾಮನು ನಮ್ಮೆಲ್ಲರಿಗೂ ದೇವರ ಸನ್ನಿಧಿಯಲ್ಲಿ ಮೂಲ ಪಿತೃವಾಗಿದ್ದಾನೆ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲದ್ದನ್ನು ಇರುವದಾಗಿ ಕರೆಯುವವನಾಗಿಯೂ ಇದ್ದಾನೆಂದು ಅಬ್ರಹಾಮನು ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪವಿತ್ರ್ ಪುಸ್ತಕ್ ಮನ್ತಾ,“ಮಿಯಾ ತುಕಾ ಸುಮಾರ್ ದೆಶಾಂಚೊ ಬಾಬಾ ಕರುನ್ ಥವ್ಲಾ” ತಸೆಮನುನ್ ಅಬ್ರಾಹಾಮಾನ್ ವಿಶ್ವಾಸ್ ಥವಲ್ಲ್ಯಾ ಮರಲ್ಲ್ಯಾಕ್ನಿ ಜಿವ್ ದಿತಲ್ಯಾ ಅನಿ ನಸಲ್ಲೆ ಹೊತ್ತ್ಯಾ ಸರ್ಕೆ ಕರ್‍ತಲ್ಲ್ಯಾ ದೆವಾಚ್ಯಾ ನದ್ರೆತ್ ಗೊಸ್ಟ್ ಬರಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:17
32 ತಿಳಿವುಗಳ ಹೋಲಿಕೆ  

ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ಹೀಗೆ ಮೃತಪ್ರಾಯನಾಗಿದ್ದ ಒಬ್ಬ ವ್ಯಕ್ತಿ ಆಕಾಶದ ನಕ್ಷತ್ರಗಳಂತೆಯೂ ಕಡಲ ತೀರದ ಮರಳಿನಂತೆಯೂ ಅಸಂಖ್ಯಾತವಾದ ಸಂತತಿಗೆ ತಂದೆಯಾದನು.


ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.


ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.


ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ನನಗೆ ಸಮಾನರು ಯಾರು? ರುಜುಪಡಿಸಲಿ, ನನ್ನ ಎದುರಿಗೆ ಬಂದು ವಾದಿಸಿ ಸ್ಥಿರಪಡಿಸಲಿ. ನರ ಸೃಷ್ಟಿಯಾದಂದಿನಿಂದ ನಡೆದುದೆಲ್ಲವನು ತಿಳಿಸಲಿ ಮುಂದಿನವುಗಳನು, ಭವಿಷ್ಯತ್ತುಗಳನು, ಈಗ ಊಹಿಸಿ ಹೇಳಲಿ.


ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”


“ ‘ನೀವು ನನ್ನ ಜನರಲ್ಲ’ ಎಂದು ಯಾವ ಸ್ಥಳದಲ್ಲಿ ಬರೆಯಲಾಗಿತ್ತೋ ಅದೇ ಸ್ಥಳದಲ್ಲಿ ‘ಅವರನ್ನು ಜೀವಂತ ದೇವರ ಮಕ್ಕಳು ಎಂದು ಕರೆಯಲಾಗುವುದು.’ “


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ.


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು