Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:2 - ಕನ್ನಡ ಸತ್ಯವೇದವು C.L. Bible (BSI)

2 ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಬ್ರಹಾಮನು ಪುಣ್ಯಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಆಸ್ಪದವಿರುವದು. ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ತನ್ನ ಕ್ರಿಯೆಗಳಿಂದ ನೀತಿವಂತನಾಗಿದ್ದರೆ ಹೊಗಳಿಕೊಳ್ಳಲು ಅವನಿಗೆ ಕಾರಣವಿರುತ್ತಿತ್ತು. ಆದರೆ ಅಬ್ರಹಾಮನು ದೇವರ ಮುಂದೆ ಹೊಗಳಿಕೊಳ್ಳಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಅಬ್ರಾಹಾಮಾನ್ ಕರಲ್ಲ್ಯಾ ಕಾಮಾಂಚ್ಯಾ ವೈನಾ ತೊ ದೆವಾಚ್ಯಾ ಇದ್ರಾಕ್ ನಿತಿವಂತ್ ಮನುನ್ ರ್‍ಹಾಲ್ಯಾರ್, ಮೊಟೆಪಾನ್ ಬೊಲುಕ್ ತೆಕಾ ಕಾರನ್ ಹಾಯ್ ಮನುನ್ ಹೊಲೆ, ಖರೆ ದೆವಾಚ್ಯಾ ನದ್ರೆತ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:2
21 ತಿಳಿವುಗಳ ಹೋಲಿಕೆ  

ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’


ನಾನು ನನ್ನನ್ನೇ ಹೊಗಳಿಕೊಳ್ಳಬೇಕಾಗಿ ಬಂದರೆ, ನನ್ನ ದೌರ್ಬಲ್ಯವನ್ನು ಬಹಿರಂಗಪಡಿಸುವ ವಿಷಯಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಇದು ಮಾನವರ ಪುಣ್ಯಕಾರ್ಯಗಳ ಪರಿಣಾಮವೂ ಅಲ್ಲ. ಆದುದರಿಂದ ಯಾರೂ ಹೆಮ್ಮೆಪಡಲು ಆಸ್ಪದವಿಲ್ಲ.


ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ!


ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು.


ಮತ್ತೊಮ್ಮೆ ನಮ್ಮನ್ನು ನಾವೇ ಹೊಗಳಿಕೊಳ್ಳುತ್ತೇವೆಂದು ನೀವು ಭಾವಿಸಬಾರದು. ನಮ್ಮನ್ನು ಕುರಿತು ನೀವೇ ಹೆಚ್ಚಳಪಡುವಂತೆ ಒಂದು ಅವಕಾಶವನ್ನು ಒದಗಿಸುತ್ತಿದ್ದೇವೆ, ಅಷ್ಟೆ. ಹೀಗೆ, ಮನುಷ್ಯನ ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಗಳನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.


ದೇವರಿಗಾಗಿ ಸಲ್ಲಿಸುವ ಈ ಸೇವೆಯನ್ನು ಕುರಿತು ನಾನು ಕ್ರಿಸ್ತಯೇಸುವಿನಲ್ಲಿ ಹೆಮ್ಮೆಪಡಲು ಕಾರಣ ಉಂಟು.


ಆಗ ಫರೋಹನು ಅಬ್ರಾಮನನ್ನು ಕರೆಸಿ, “ನೀನು ಮಾಡಿರುವುದೇನು?


ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಮಾಡುತ್ತಿರುವ ಪ್ರೇಷಿತರ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಅವರಿಗೆ ಅಂಥ ಆಸ್ಪದವನ್ನು ಕೊಡದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ದೇವರು ನನಗೆ, “ನೀನು ಒಳಹೊಕ್ಕು ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದು ಹೇಳಿದರು. ನಾನು ಹೊಕ್ಕು ನೋಡಿದೆ;


ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಅವನ ಅಪ್ಪಣೆ ಪಡೆದ ಸೇವಕರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು