Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:20 - ಕನ್ನಡ ಸತ್ಯವೇದವು C.L. Bible (BSI)

20 ದೇವರ ವಾಗ್ದಾನದಲ್ಲಿ ಆತನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಸಂಶಯಪಡಲಿಲ್ಲ ಮತ್ತು ತನ್ನ ನಂಬಿಕೆಯನ್ನು ಕೊನೆಗೊಳಿಸಲಿಲ್ಲ. ಅವನು ತನ್ನ ನಂಬಿಕೆಯಲ್ಲಿ ಬಲವಾಗಿ ಬೆಳೆದನು ಮತ್ತು ದೇವರಿಗೆ ಸ್ತೋತ್ರ ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಚ್ಯಾ ವಿಶ್ವಾಸಾನ್ ತೆಕಾ ಸೊಡುಕ್ ನಾ, ಅನಿ ತೆನಿ ದೆವಾನ್ ದಿಲ್ಯಾನಾಯ್ ಗೊಸ್ಟಿ ವರ್‍ತಿ ಸಂಶೆವ್ ಕರುಕ್ ನಾ, ತೆಚ್ಯಾ ವಿಶ್ವಾಸಾನ್ ತೆಕಾ ಬಳಾನಿ ಭರ್ಲ್ಯಾನ್, ಅನಿ ತೆನಿ ದೆವಾಚಿ ಸುತ್ತಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:20
21 ತಿಳಿವುಗಳ ಹೋಲಿಕೆ  

ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.”


ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.


ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.


ಅದಕ್ಕೆ ಜಕರೀಯನು, “ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು,” ಎಂದನು.


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ಒಡಂಬಡಿಕೆಯ ದ್ರೋಹಿಗಳು ಅವನ ನಯನುಡಿಗೆ ಮಾರುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.


ಆ ಸರದಾರನು, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದದ್ದರಿಂದ ದೈವಪುರುಷನು ಅವನಿಗೆ, “ನೀನು ಅದನ್ನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ನುಡಿದಿದ್ದನು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು