Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:13 - ಕನ್ನಡ ಸತ್ಯವೇದವು C.L. Bible (BSI)

13 ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಧರ್ಮಶಾಸ್ತ್ರ ಉಂಟಾಗುವದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು; ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೋಶೆಯ ಧರ್ಮಶಾಸ್ತ್ರಕ್ಕಿಂತ ಮೊದಲೇ ಪಾಪವು ಲೋಕದಲ್ಲಿತ್ತು. ಧರ್ಮಶಾಸ್ತ್ರವು ಇಲ್ಲದಿದ್ದರೆ, ದೇವರು ಜನರ ಪಾಪವನ್ನು ಪರಿಗಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖಾಯ್ದೊ ದಿವ್ಚ್ಯಾ ಅದ್ದಿಕ್ನಾಚ್ ಹ್ಯಾ ಜಗಾತ್ ಪಾಪಾ ಹೊತ್ತೊ; ಖರೆ ಪಾಪಾಂಚೊ ಲೆಕ್ಕ್ ಧರುನ್ ಹೊಯ್‍ನಶಿ, ಕಶ್ಯಾಕ್ ಮಟ್ಲ್ಯಾರ್, ಖಾಯ್ದೊ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:13
16 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ.


ಪಾಪವೇ ಸಾವಿನ ವಿಷಕೊಂಡಿ. ಪಾಪಕ್ಕೆ ಶಕ್ತ್ಯಾಧಾರ ಶಾಸ್ತ್ರವಿಧಿಗಳೇ.


ಪಾಪಮಾಡುವ ಪ್ರತಿಯೊಬ್ಬನೂ ದೇವರ ಆಜ್ಞೆಯನ್ನು ಮೀರುತ್ತಾನೆ. ದೇವರ ಆಜ್ಞೆಯನ್ನು ಉಲ್ಲಂಘಿಸುವುದೇ ಪಾಪ.


ಈ ನಡತೆ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟದಾಗಿತ್ತು. ಆದ್ದರಿಂದ ಸರ್ವೇಶ್ವರ ಅವನನ್ನೂ ಸಾವಿಗೀಡುಮಾಡಿದರು.


ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು.


ಎಂದೇ ಬಾ ತಂದೆಗೆ ದ್ರಾಕ್ಷಾರಸವನ್ನು ಕುಡಿಸೋಣ; ಅವನ ಸಂಗಡ ಮಲಗಿಕೊಂಡು ತಂದೆಯಿಂದಲಾದರೂ ಸಂತಾನ ಪಡೆದುಕೊಳ್ಳೋಣ,“ ಎಂದಳು.


ಆದರೆ ಅವರು ಮಲಗುವುದಕ್ಕೆ ಮುಂಚೆ ಆ ಸೊದೋಮ್ ಪಟ್ಟಣದ ಗಂಡಸರು, ಹುಡುಗರು-ಮುದುಕರು ಎನ್ನದೆ, ಎಲ್ಲರೂ ಬಂದು ಆ ಮನೆಯನ್ನು ಮುತ್ತಿದರು.


ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ಗರ್ಭಿಣಿಯರಾದರು.


ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು