ರೋಮಾಪುರದವರಿಗೆ 5:14 - ಕನ್ನಡ ಸತ್ಯವೇದವು C.L. Bible (BSI)14 ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ಮೀರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನು ದೇವಾಜ್ಞೆಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚಕಪುರುಷನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೂ ಮರಣವು ಆದಾಮನಿಂದ ಮೋಶೆಯವರೆಗೂ ದೊರೆತನ ಮಾಡುತ್ತಿತ್ತು. ಆದಾಮನು ಮಾಡಿದ ಅಪರಾಧಕ್ಕೆ ಸಮಾನವಾಗಿ ಪಾಪಮಾಡಿದವರ ಮೇಲೆಯೂ ಅದು ದೊರೆತನ ಮಾಡುತ್ತಿತ್ತು. ಆದಾಮನು ಮುಂದೆ ಬರಲಿಕ್ಕಿದ್ದ ಒಬ್ಬಾತನಿಗೆ ಸಂಕೇತವಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ಆದಾಮಾಚ್ಯಾ ಎಳಾಕ್ನಾ ಮೊಯ್ಜೆಚ್ಯಾ ಎಳಾ ಪತರ್ ಮರ್ನಾನ್ ಸಗ್ಳ್ಯಾ ಮಾನ್ಸಾಂಚ್ಯಾ ವರ್ತಿ ಅಪ್ನಾಚೊ ಅದಿಕಾರ್ ಚಾಲ್ವುಲ್ಯಾನ್, ಆದಾಂವಾನ್ ದೆವಾಚ್ಯಾ ಗೊಸ್ಟಿಕ್ ಖಾಲ್ತಿ ಹೊವ್ನ್ ಚಲಿನಸ್ತಾನಾ ಪಾಪ್ ಕರಲ್ಲ್ಯಾ ಸಾರ್ಕೆ ಪಾಪ್ ಕರುನಸಲ್ಲ್ಯಾ ವರ್ತಿ ಸೈತ್ ಮರ್ನಾನ್ ಅದಿಕಾರ್ ಚಾಲ್ವುಲ್ಯಾನ್. ಆದಾಮಾನ್ ಜೊ ಕೊನ್ ಯೆತಲೊ ಹಾಯ್ ತ್ಯಾ ಕ್ರಿಸ್ತಾಕ್ ದಾಕ್ವುನ್ ದಿತಲೊ ಹೊವ್ನ್ ಹೊತ್ತೊ. ಅಧ್ಯಾಯವನ್ನು ನೋಡಿ |