Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:16 - ಕನ್ನಡ ಸತ್ಯವೇದವು C.L. Bible (BSI)

16 ದೇವರ ಉಚಿತಾರ್ಥವರಕ್ಕೂ ಒಬ್ಬ ಮನುಷ್ಯನ ಪಾಪದ ಪರಿಣಾಮಕ್ಕೂ ಎಷ್ಟೋ ವ್ಯತ್ಯಾಸವಿದೆ. ಆ ಒಂದು ಪಾಪದ ಪರಿಣಾಮವಾಗಿ ಮನುಷ್ಯನು ಅಪರಾಧಿಯೆಂದು ನಿರ್ಣಯಿಸಲ್ಪಟ್ಟನು. ಆದರೆ ಅನೇಕರು ಅಪರಾಧಿಗಳಾದ ಮೇಲೂ ಕೊಡಲಾಗುವ ಉಚಿತಾರ್ಥ ವರವು ದೇವರೊಡನೆ ಸತ್ಸಂಬಂಧವನ್ನು ಉಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಫಲ ಬಂದಂತೆ ಈ ವರವು ಬರಲಿಲ್ಲ; ಹೇಗಂದರೆ ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ನಿರ್ಣಯವು ಉಂಟಾಯಿತು, ಆದರೆ ದೇವರ ಕೃಪಾದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ಅವರನ್ನು ನೀತಿವಂತರೆಂದು ನಿರ್ಣಯಿಸುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದಾಮನು ಒಮ್ಮೆ ಪಾಪಮಾಡಿದ ಮೇಲೆ ಅವನಿಗೆ ಅಪರಾಧಿ ಎಂದು ತೀರ್ಪು ನೀಡಲಾಯಿತು. ಆದರೆ ದೇವರ ಉಚಿತವಾದ ಕೊಡುಗೆ ಅದಕ್ಕೆ ತದ್ವಿರುದ್ಧವಾಗಿದೆ. ಅನೇಕ ಪಾಪಗಳ ದೆಸೆಯಿಂದ ದೇವರ ಉಚಿತವಾದ ಕೊಡುಗೆ ಬಂದಿತು. ಆ ಉಚಿತ ಕೊಡುಗೆ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಪಲ ಬಂದಂತೆ ಈ ವರವು ಬರಲಿಲ್ಲ. ಹೇಗೆಂದರೆ, ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ದಂಡನಾತೀರ್ಪು ಉಂಟಾಯಿತು. ಆದರೆ ದೇವರ ಕೃಪೆಯು ಅನೇಕರ ಅಪರಾಧಗಳಿಂದ ಅವರನ್ನು ನೀತಿವಂತರೆಂದು ನಿರ್ಣಯಿಸುವುದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವಾಚ್ಯಾ ದೆನ್ಗಿಚ್ಯಾ ಅನಿ ಎಕ್ ಮಾನ್ಸಾಚ್ಯಾ ಪಾಪಾಚ್ಯಾ ಮದ್ದಿ ಫರಕ್ ಹಾಯ್. ಎಕ್ಲ್ಯಾಚ್ಯಾ ಪಾಪಾಚ್ಯಾ ವೈನಾ ಚುಕಿದಾರ್ ಮನ್ತಲೊ ನಿರ್‍ನಯ್ ಯೆಲೊ; ಖರೆ ಸುಮಾರ್ ಪಾಪಾಂಚ್ಯಾ ಮಾನಾ ಫುಕೊಟ್ ಗಾವಾಲ್ಲ್ಯಾ ಕುರ್ಪೆಚ್ಯಾ ದೆನ್ಗಿ ವೈನಾ ಚುಕಿದಾರ್ ನ್ಹಯ್ ಮನ್ತಲೊ ನಿರ್‍ನಯ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:16
14 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


“ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು