ರೋಮಾಪುರದವರಿಗೆ 5:17 - ಕನ್ನಡ ಸತ್ಯವೇದವು C.L. Bible (BSI)17 ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳುವದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವದು ಮತ್ತೂ ನಿಶ್ಚಯವಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಎಕ್ ಮಾನ್ಸಾಕ್ ಲಾಗುನ್ ಎಕ್ ಮಾನ್ಸಾಚ್ಯಾ ಪಾಪಾಕ್ ಲಾಗುನ್ ಮರ್ನಾನ್ ಅಪ್ನಾಚೊ ಅದಿಕಾರ್ ಚಾಲ್ವುಕ್ ಚಾಲು ಕರ್ಲ್ಯಾನ್ ತೆ ಖರೆ ಹಾಯ್. ಖರೆ ಎಕ್ಲ್ಯಾನ್ ಜೆಜು ಕ್ರಿಸ್ತಾನ್ ಕರಲ್ಲ್ಯಾ ಕಾಮಾ ವೈನಾ ಪಡಲ್ಲೊ ಪ್ರಭಾವ್ ಕವ್ಡೊ ಮೊಟೊ! ದೆವಾಚಿ ಮಾಪುಕ್ ಹೊಯ್ನಾ ತವ್ಡಿ ಮೊಟಿ ಕುರ್ಪಾ ಘೆಟಲ್ಲ್ಯಾ ಸಗ್ಳ್ಯಾ ಜಾನಾಕ್ನಿ ಫುಕೊಟ್ ತೆನಿ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊತಾ ಅನಿ ತೆನಿ ಕ್ರಿಸ್ತಾಚ್ಯಾ ಜಿವಾನಿ ಭರುನ್ ಅದಿಕಾರ್ ಚಾಲ್ವುತ್ಯಾತ್. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.