Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:6 - ಕನ್ನಡ ಸತ್ಯವೇದವು C.L. Bible (BSI)

6 ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇವಿುತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಮಿ ಆದಾರ್ ನಸಲ್ಲ್ಯಾ ಸಾರ್ಕೆ ಹೊತ್ತ್ಯಾ ತನ್ನಾ ಕ್ರಿಸ್ತ್ ದೆವಸ್ಪಾನ್ ನಸಲ್ಲ್ಯಾ ಅಮ್ಚ್ಯಾ ಸಾಟ್ನಿ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:6
30 ತಿಳಿವುಗಳ ಹೋಲಿಕೆ  

ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.


ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು, ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.


ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.


ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ಉತ್ತರರಾಜನು ಬಂದು, ಮುತ್ತಿಗೆಹಾಕಿ, ಕೋಟೆಕೊತ್ತಲದ ನಗರವನ್ನು ಹಿಡಿಯುವನು. ದಕ್ಷಿಣದ ಭುಜಬಲವು ಅವನನ್ನು ನಿಲ್ಲಿಸಲಾರದು. ಅಲ್ಲಿನ ಮಹಾವೀರರು ತಡೆಯಲಾರರು. ಎದುರಿಸುವ ಯಾವ ಶಕ್ತಿಯೂ ಇರದು.


ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II


ಕಳೆದುಹೋಗಿದೆಯಲ್ಲಾ ಸಿಯೋನ್ ನಗರಿಯ ವೈಭವವೆಲ್ಲಾ ! ಮೇವಿಲ್ಲದೆ ಬಡಕಲಾದ ಜಿಂಕೆಗಳಂತೆ ಅದರ ನಾಯಕರೆಲ್ಲಾ ಓಡಿಹೋದರು ಬೆಂಗೊಟ್ಟು ಅಟ್ಟಿಬಂದವರಿಗೆಲ್ಲಾ !


“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.


ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಪ್ರತಿಯೊಬ್ಬ ಪ್ರಧಾನಯಾಜಕನು ಕಾಣಿಕೆಗಳನ್ನೂ ಬಲಿಗಳನ್ನೂ ಅರ್ಪಿಸುವುದಕ್ಕಾಗಿಯೇ ನೇಮಕಗೊಂಡಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ನಮ್ಮ ಈ ಪ್ರಧಾನಯಾಜಕರಿಗೂ ಏನಾದರೂ ಇರಲೇಬೇಕು.


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು