Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:14 - ಕನ್ನಡ ಸತ್ಯವೇದವು C.L. Bible (BSI)

14 ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಕಂದರೆ ಪಾಪವು ನಿಮ್ಮ ಮೇಲೆ ಅಧಿಕಾರನಡಿಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಪಾಪ್ ತುಮ್ಚೊ ಯಜಮಾನ್ ಹೊತಲೆ ನಕ್ಕೊ; ಕಶ್ಯಾಕ್ ಮಟ್ಲ್ಯಾರ್ ತುಮಿ ಖಾಯ್ದ್ಯಾಂಚ್ಯಾ ತಾಬೆತ್ ನಾಶಿ ದೆವಾಚ್ಯಾ ಕುರ್ಪೆಚ್ಯಾ ತಾಬೆತ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:14
25 ತಿಳಿವುಗಳ ಹೋಲಿಕೆ  

ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ.


ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಕ್ರೈಸ್ತವಿಶ್ವಾಸದ ಕಾಲವು ಬರುವುದಕ್ಕೆ ಮೊದಲು ನಾವು ಧರ್ಮಶಾಸ್ತ್ರದ ನಿರ್ಬಂಧಕ್ಕೆ ಒಳಗಾಗಿ ಕೈದಿಗಳಂತೆ ಇದ್ದೆವು. ಈ ವಿಶ್ವಾಸವು ಪ್ರಕಟವಾಗುವವರೆಗೂ ಇದೇ ಪರಿಸ್ಥಿತಿ ಇತ್ತು.


ಆದ್ದರಿಂದ ಸಹೋದರರೇ, ನಾವು ಶರೀರ ಸ್ವಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬಾಳುವ ಹಂಗಿನಲ್ಲೂ ಇಲ್ಲ.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಧರ್ಮಶಾಸ್ತ್ರಕ್ಕೆ ಅಧೀನರಾಗಲು ಆಶಿಸುವವರೇ, ನನಗೆ ಉತ್ತರ ಕೊಡಿ: ಅದೇ ಧರ್ಮಶಾಸ್ತ್ರ ಹೇಳುವುದನ್ನು ನೀವು ಕೇಳಿಲ್ಲವೇ?


ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.


ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.


ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ.


ಆಗ ಅವನನ್ನೂ ಅವನ ಮಕ್ಕಳನ್ನೂ ಬಿಡುಗಡೆ ಮಾಡಬೇಕು; ಆಗ ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸೊತ್ತಿಗೂ ಹಿಂದಿರುಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು