Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:4 - ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ಹೊಸಬರಾಗಿ ನಡಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆ ಹೊವ್ನ್ ಅಮ್ಚ್ಯಾ ಬಾಲ್ತಿಮಾ ವೈನಾ ಅಮಿ ತೆಚ್ಯಾ ಮರ್‍ನಾತ್ ವಾಟೊ ಘೆಟ್ಲ್ಯಾಂವ್ ಅನಿ ಅಮ್ಕಾ ತೆಚ್ಯಾ ವಾಂಗ್ಡಾ ಮಾಟಿ ದಿವ್ನ್ ಹೊಲಿ, ಅಶೆ ಜೆ ಕಶೆ ಕ್ರಿಸ್ತಾಕ್ ಬಾಬಾಚ್ಯಾ ಮಹಿಮೆಚ್ಯಾ ಬಳಾನ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವುನ್ ಹೊಲೆ, ತಸೆಚ್ ಅಮಿಬಿ ಝಿತ್ತೆ ರ್‍ಹಾವ್ನ್ ಎಕ್ ನ್ಹವ್ಯಾ ಜಿವನಾತ್ ಚಲುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:4
33 ತಿಳಿವುಗಳ ಹೋಲಿಕೆ  

ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


ಈಗಲಾದರೋ ನಮ್ಮನ್ನು ಬಂಧನದಲ್ಲಿಟ್ಟಿದ್ದ ಆ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತು, ಬಿಡುಗಡೆ ಹೊಂದಿದ್ದೇವೆ. ಆದ್ದರಿಂದ ಲಿಖಿತವಾದ ಹಳೆಯ ಶಾಸ್ತ್ರಕ್ಕೆ ಬದ್ಧರಾಗದೆ ಪವಿತ್ರಾತ್ಮಪ್ರೇರಿತವಾದ ನವೀನ ಮಾರ್ಗದಲ್ಲಿ ನಡೆಯುತ್ತಾ ಇದ್ದೇವೆ.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.


ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.


ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ?


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.


“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಯಜಮಾನರೇ, ಸ್ವರ್ಗಲೋಕದಲ್ಲಿ ನಿಮಗೂ ಒಬ್ಬ ಒಡೆಯನಿದ್ದಾನೆಂಬುದನ್ನು ತಿಳಿದುಕೊಂಡು ನಿಮ್ಮ ಮನೆಯಾಳುಗಳನ್ನು ನ್ಯಾಯಬದ್ಧ ರೀತಿಯಲ್ಲಿ ನೋಡಿಕೊಳ್ಳಿ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು