Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:13 - ಕನ್ನಡ ಸತ್ಯವೇದವು C.L. Bible (BSI)

13 ಹಾಗಾದರೆ ಹಿತಕರವಾದದ್ದೇ ನನಗೆ ಮೃತ್ಯುಕಾರಕವಾಯಿತೇ? ಇಲ್ಲವೇ ಇಲ್ಲ! ಹಾಗೆ ಮೃತ್ಯುಕಾರಕವಾದುದು ಪಾಪವೇ. ತನ್ನ ನಿಜಸ್ವರೂಪವನ್ನು ತೋರಿಸುವುದಕ್ಕಾಗಿ ಪಾಪವು ನನಗೆ ಹಿತಕರವಾದುದನ್ನು ಉಪಯೋಗಿಸಿಕೊಂಡು ನನಗೆ ಮರಣವನ್ನು ತಂದಿತು. ಹೀಗೆ ಪಾಪವು ಅದೆಷ್ಟು ಭೀಕರವಾದುದೆಂದು ಆಜ್ಞೆಯ ಮೂಲಕ ವ್ಯಕ್ತವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಹೇಳಬಾರದು. ಪಾಪವೇ ಮರಣಕ್ಕೆ ಕಾರಣವಾದದ್ದು; ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು; ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಕಾಣಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ತೆ ಬರೆಚ್ ಮಾಜ್ಯಾ ಮರ್‍ನಾಕ್ ಕಾರನ್ ಹೊಲೆ ಕಾಯ್? ಹೆಚೊ ಅರ್ತ್‍ ತೊ ನ್ಹಯ್! ಹೆ ಸಗ್ಳೆ ಪಾಪಾನ್ ಕರ್‍ಲ್ಯಾನ್; ಬರೆ ಅಸಲ್ಲೆ ವಾಪ್ರುನ್ ಪಾಪಾನ್ ಮರಾನ್ ಹಾನ್ಲ್ಯಾನ್. ಹೆಚ್ಯಾ ವೈನಾ ಪಾಪಾಚೊ ಸ್ವಬಾವ್ ಕಸ್ಲೊ ಮನುನ್ ದಿಸುನ್ ಯೆಲೊ, ಅನಿ ಅಶೆ ಹುಕುಮಾ ವೈನಾ ಪಾಪ್ ಕವ್ಡೊ ವಾಯ್ಟ್ ಮನ್ತಲೆ ಬರೆ ದಿಸುನ್ ಯೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:13
7 ತಿಳಿವುಗಳ ಹೋಲಿಕೆ  

ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


ಅದರಂತೆಯೇ ಆ ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು.


“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು