Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:14 - ಕನ್ನಡ ಸತ್ಯವೇದವು C.L. Bible (BSI)

14 ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಧರ್ಮಶಾಸ್ತ್ರವು ಪಾರಮಾರ್ಥಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ ಪಾಪದ ಸ್ವಾಧೀನದಲ್ಲಿರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖಾಯ್ದೊ ಆತ್ಮಿಕ್ ಮನುನ್ ಅಮ್ಕಾ ಗೊತ್ತ್ ಹಾಯ್; ಖರೆ ಮಿಯಾ ಎಕ್‍ ಬುರ್ಸೊ, ಪಾಪಾಚೊ ಗುಲಾಮ್ ಕರುನ್ ಇಕಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:14
38 ತಿಳಿವುಗಳ ಹೋಲಿಕೆ  

ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ.


ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ;


ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II


ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ, ಶತಾಧಿಪತಿ ತನ್ನ ಗೆಳೆಯರ ಮುಖಾಂತರ, “ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ.


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಮಾನವರಲ್ಲಿ ನನ್ನಂಥ ಪಶುಪ್ರಾಯನಿಲ್ಲ; ಮನುಷ್ಯ ವಿವೇಕವೂ ನನಗಿಲ್ಲ.


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


ಸೂರ್ಯೋದಯವಾದ ನಂತರ ಒಬ್ಬನು ಕಳ್ಳನನ್ನು ಹೊಡೆದುಕೊಂದರೆ ಅದು ನರಹತ್ಯವೇ ಸರಿ. ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಕೊಡಬೇಕು. ಅವನಲ್ಲಿ ಕೊಡಲು ಏನೂ ಇಲ್ಲದಿದ್ದರೆ ಮಾಡಿದ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.


ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು.


ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ? ರಕ್ತಸಂಬಂಧಿಯಲ್ಲವೆ?” ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣತಮ್ಮಂದಿರು ಒಪ್ಪಿದರು.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟುಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ.


ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.


ನಮ್ಮ ಸ್ಥಿತಿಯೂ ಹಾಗೆಯೇ ಇತ್ತು. ನಾವು ಬಾಲಕರಂತೆ ವಿಶ್ವದ ಮೂಲಭೂತ ಶಕ್ತಿಗಳಿಗೆ ಅಧೀನರಾಗಿದ್ದೆವು.


ಆದರೆ ಒಬ್ಬ ವ್ಯಕ್ತಿಯ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ ಯಾಜಕನು ನೋಡುವಾಗ


ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು