Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:25 - ಕನ್ನಡ ಸತ್ಯವೇದವು C.L. Bible (BSI)

25 ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬಿಡಿಸುವವನು ಇದ್ದಾನೆಂಬದಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ. ಹೀಗಿರಲಾಗಿ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೆ ಆಳಾಗಿಯೂ ಶರೀರಭಾವದಿಂದ ಪಾಪವೆಂಬ ನಿಯಮಕ್ಕೆ ಆಳಾಗಿಯೂ ನಡಕೊಳ್ಳುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಚ್ಯಾ ದೆವಾಕ್ ಧನ್ಯವಾದ್ ಹೊಂವ್ದಿತ್! ತಸೆ ಹೊಲ್ಯಾರ್ ಮಾಜಿ ಪರಿಸ್ಥಿತಿ ಕಶಿ ಕಾಯ್ ಮಟ್ಲ್ಯಾರ್: ಮಿಯಾ ಮಾಜ್ಯಾ ಬಳಾನ್ ಖಾಲಿ ಮನಾತ್ ಎವ್ಡೆಚ್ ದೆವಾಚ್ಯಾ ಖಾಯ್ದ್ಯಾಚಿ ಸೆವಾ ಕರ್‍ತಾ ಅನಿ ಎಕಾಕ್ಡೆ ಮಾಜೊ ಮಾನುಸ್ಪಾನಾಚೊ ಸ್ವಬಾವ್ ಪಾಪಾಚಿ ಸೆವಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:25
20 ತಿಳಿವುಗಳ ಹೋಲಿಕೆ  

ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಆದರೆ ನಮ್ಮ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ನಮಗೆ ಜಯವನ್ನು ದೊರಕಿಸಿಕೊಟ್ಟಿರುವ ದೇವರಿಗೆ ಸ್ತೋತ್ರ ಸಲ್ಲಲಿ!


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತುತಿಸ್ತೋತ್ರ ಸಲ್ಲಲಿ!


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು