Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:19 - ಕನ್ನಡ ಸತ್ಯವೇದವು C.L. Bible (BSI)

19 ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಪ್ನಾಚ್ಯಾ ಪೊರಾಂಚಿ ಮಹಿಮಾ ದೆವ್ ಕನ್ನಾ ದಾಕ್ವುನ್ ದಿತಾ ಮನುನ್ ಬಗುಕ್ ಸಗ್ಳಿ ಸೃಸ್ಟಿ ಉಮ್ಮೆದಿನ್ ವಾಟ್ ಬಗುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:19
26 ತಿಳಿವುಗಳ ಹೋಲಿಕೆ  

ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.


ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು.


ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ.


ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ.


“ ‘ನೀವು ನನ್ನ ಜನರಲ್ಲ’ ಎಂದು ಯಾವ ಸ್ಥಳದಲ್ಲಿ ಬರೆಯಲಾಗಿತ್ತೋ ಅದೇ ಸ್ಥಳದಲ್ಲಿ ‘ಅವರನ್ನು ಜೀವಂತ ದೇವರ ಮಕ್ಕಳು ಎಂದು ಕರೆಯಲಾಗುವುದು.’ “


ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.


ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ಕ್ರಿಸ್ತಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ.


“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು