Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜಗತ್ತು ವ್ಯರ್ಥತ್ವಕ್ಕೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಫೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಗ್ಳ್ಯಾ ರಚ್ನಾನ್ ಅಪ್ನಾಚೊ ಉದ್ದೆಸ್ ಪುರಾ ಕರುಕ್ ನಾ ಮಟ್ಲ್ಯಾರ್, ತೆ ತಿಚ್ಯಾ ಸ್ವತಾಚ್ಯಾ ಮನಾನ್ ನ್ಹಯ್, ತಿಕಾ ಖಾಲ್ತಿ ಕರಲ್ಲ್ಯಾ ದೆವಾಚ್ಯಾ ಮರ್ಜಿ ಸರ್ಕೆ ತೆ ಹೊಲಾ. ಅಜುನ್ ಜಾಲ್ಯಾರ್‍ಬಿ ತಿಕಾ ಬರೊಸೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:20
14 ತಿಳಿವುಗಳ ಹೋಲಿಕೆ  

ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.


ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ!


ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.


ಹೌದು, ಹಾಳುಮಾಡಿದ್ದಾರೆ ಪಾಳುಬಿದ್ದು ಅದು ನನಗೆ ಗೋಳಿಡುತ್ತಿದೆ ಯಾವನೂ ಗಮನಕ್ಕೆ ತಂದುಕೊಳ್ಳದೆ ನಾಡೆಲ್ಲ ಬಿಕೋ ಎನ್ನುತ್ತಿದೆ.


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು