Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:24 - ಕನ್ನಡ ಸತ್ಯವೇದವು C.L. Bible (BSI)

24 ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾವು ರಕ್ಷಣೆಯನ್ನು ಹೊಂದಿದವರಾದರೂ ಇನ್ನು ಎದುರುನೋಡುವವರಾಗಿದ್ದೇವೆ. ಎದುರುನೋಡುವ ಪದವಿ ಪ್ರತ್ಯಕ್ಷವಾಗಿದ್ದರೆ ಎದುರುನೋಡುವದೇಕೆ? ಪ್ರತ್ಯಕ್ಷವಾದದ್ದನ್ನು ಎದುರುನೋಡುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ಆ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕಶ್ಯಾಕ್ ಮಟ್ಲ್ಯಾರ್ ಹ್ಯಾ ಬರೊಸ್ಯಾಚ್ಯಾ ವೈನಾಚ್ ಅಮ್ಕಾ ಸುಟ್ಕಾ ಗಾವ್ತಾ; ಖರೆ ಅಮಿ ಬರೊಸೊ ಥವ್ನ್ ಹೊತ್ತೆ ಅಮ್ಚ್ಯಾ ಡೊಳ್ಯಾಕ್ನಿ ದಿಸುಕ್ ಲಾಗ್ಲಾ ಹೊಲ್ಯಾರ್ ತೊ ಬರೊಸೊ ನ್ಹಯ್ ಕಶ್ಯಾಕ್ ಮಟ್ಲ್ಯಾರ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:24
29 ತಿಳಿವುಗಳ ಹೋಲಿಕೆ  

ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಢ ನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ.


ನಾವು ನೋಡಿ ನಡೆಯುವವರಲ್ಲ, ನಂಬಿ ನಡೆಯುವವರು.


ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.


ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು I ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು II


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.


ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ನಂಬಿಕೆಯಿಂದ ಕಾದಿರುವ ಸೆರೆಯಾಳುಗಳೇ, ಹಿಂದಿರುಗಿರಿ ನಿಮ್ಮ ಸುಭದ್ರ ದುರ್ಗಸ್ಥಾನಕೆ ಇಗೋ, ಈಗಲೂ ಘೋಷಿಸುತ್ತಿರುವೆ: ನಿಮಗಿಮ್ಮಡಿ ಸೌಭಾಗ್ಯ ನೀಡುವೆ.


ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ.


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ನಮ್ಮ ಮೇಲಿರಲಿ ಪ್ರಭು, ನಿನ್ನಚಲ ಪ್ರೀತಿ I ಕಾದಿಹೆವು ಇದೋ ನಿನ್ನ ನಂಬಿ ಭರವಸದಿ II


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.


ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ.


ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು