Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:4 - ಕನ್ನಡ ಸತ್ಯವೇದವು C.L. Bible (BSI)

4 ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮ ಅವರ ಚಿತ್ತಕ್ಕನುಸಾರವಾಗಿ ನಡೆಯುವ ನಮ್ಮಲ್ಲಿ ಧರ್ಮಶಾಸ್ತ್ರದ ನೀತಿನಿಯಮಗಳು ನೆರವೇರುವಂತೆ ದೇವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮಾನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವದಕ್ಕೆ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈಗ ನಮ್ಮ ಸ್ವಭಾವಕ್ಕನುಸಾರವಾಗಿ ಜೀವಿಸದೆ ಪವಿತ್ರಾತ್ಮನಿಗನುಸಾರವಾಗಿ ಜೀವಿಸುತ್ತಿರುವ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮಗಳು ನೆರವೇರಲೆಂದು ದೇವರು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗೆ ನಾವು ಮಾಂಸಭಾವದವರಾಗಿ ಬಾಳದೆ ಪವಿತ್ರಾತ್ಮರಿಗನುಸಾರವಾಗಿ ಬಾಳುವ ನಮ್ಮಲ್ಲಿ ನಿಯಮದ ಅಗತ್ಯವು ನೆರವೇರುವುದಕ್ಕೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಶೆ ಮಾನ್ಸಾಚ್ಯಾ ಸ್ವಬಾವಾಚ್ಯಾ ಸರ್ಕೆ ಅಮಿ ಚಲಿನಸ್ತಾನಾ ಪವಿತ್ರ್ ಆತ್ಮ್ಯಾಚ್ಯಾ ಪರ್‍ಕಾರ್ ಚಲ್ತಲ್ಯಾ ಅಮ್ಚ್ಯಾ ಭುತ್ತುರ್ ಖಾಯ್ದ್ಯಾಚ್ಯಾ ಖರ್ಯ್ಯಾ ವಾಟೆನ್ ಚಲ್ತಲಿ ಹಿ ಗೊಸ್ಟ್ ಪುರಾ ಹೊವ್‍ಸಾಟ್ನಿ ದೆವಾನ್ ಅಶೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:4
13 ತಿಳಿವುಗಳ ಹೋಲಿಕೆ  

ನಾನು ಹೇಳುವುದೇನೆಂದರೆ: ನೀವು ಪವಿತ್ರಾತ್ಮರ ಪ್ರೇರಣೆಗನುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ.


ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಸುನ್ನತಿ ಮಾಡಿಸಿಕೊಳ್ಳದ ಮತ್ತೊಬ್ಬನು ಧರ್ಮಶಾಸ್ತ್ರದ ವಿಧಿಗಳನ್ನು ಪಾಲಿಸಿಕೊಂಡು ಬಂದವನಾಗಿದ್ದರೆ, ದೇವರು ಅವನನ್ನು ಸುನ್ನತಿ ಮಾಡಿಸಿಕೊಂಡವನಂತೆ ಪರಿಗಣಿಸುವುದಿಲ್ಲವೆ?


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ನಾನು ನಿಮ್ಮ ಬಳಿಗೆ ಬಂದಾಗ, ಕಠಿಣನಾಗಿ ವರ್ತಿಸಲು ಅವಕಾಶ ಕೊಡಬೇಡಿ. ನಾವು ಪ್ರಾಪಂಚಿಕ ರೀತಿನೀತಿಗಳಿಗೆ ಅನುಗುಣವಾಗಿ ನಡೆಯುತ್ತಿದ್ದೇವೆಂದು ದೂಷಿಸುವವರ ವಿರುದ್ಧ ಖಂಡಿತವಾಗಿಯೂ ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.


ನಾವು ಪ್ರಪಂಚದಲ್ಲಿ ಬಾಳುತ್ತಿದ್ದರೂ ನಮ್ಮ ಹೋರಾಟ ಪ್ರಾಪಂಚಿಕ ಉದ್ದೇಶದಿಂದ ಕೂಡಿದ್ದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು