Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:18 - ಕನ್ನಡ ಸತ್ಯವೇದವು C.L. Bible (BSI)

18 ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ರಾತಾನಾ, ದೆವ್ ಅಪ್ನಾಕ್ ಪಾಜೆ ತೆಂಚೆ ವರ್‍ತಿ ದಯಾ ದಾಕ್ವುತಾ, ಅನಿ ಅಪ್ನಾಕ್ ಮನಾಕ್ ಯೆತಾ ತೆಂಕಾ ಕಠೊರ್ ಮನಾಚಿ ಹೊಯ್ ಸರ್ಕೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:18
24 ತಿಳಿವುಗಳ ಹೋಲಿಕೆ  

ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.


ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಸರ್ವೇಶ್ವರ ಈ ಮೊದಲೇ ಹೇಳಿದ್ದಂತೆ ಫರೋಹನ ಹೃದಯ ಕಲ್ಲಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.


ಆದರೂ ಸರ್ವೇಶ್ವರ, ಮೋಶೆಗೆ ಮುಂತಿಳಿಸಿದಂತೆಯೇ ಆಯಿತು. ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಬಳಿಕ ಸರ್ವೇಶ್ವರ ಸ್ವಾಮಿ ಮೋಶೆಗೆ: “ಫರೋಹನ ಬಳಿಗೆ ಮತ್ತೆ ಹೋಗು. ನಾನು ಅವನ ಮತ್ತು ಅವನ ಪರಿವಾರದವರ ಹೃದಯಗಳನ್ನು ಮೊಂಡಾಗಿಸಿದ್ದೇನೆ. ಏಕೆಂದರೆ ಈ ಸೂಚಕಕಾರ್ಯಗಳನ್ನು ಅವರ ಮುಂದೆ ನಡೆಸಲು ಆಸ್ಪದವಾಗಬೇಕು;


ಆದರೂ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣವಾಗಿಸಿದರು. ಅವನು ಇಸ್ರಯೇಲರನ್ನು ಹೋಗಲು ಬಿಡಲಿಲ್ಲ.


ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಅವರಿಗೆ ಅಪ್ಪಣೆಕೊಡಲು ಒಪ್ಪಲಿಲ್ಲ.


ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಫರೋಹನು ಆಳುಗಳನ್ನು ಕಳುಹಿಸಿ ವಿಚಾರಿಸಿದನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳಿದುಬಂದಿತು. ಆದರೂ ಕೂಡ ಫರೋಹನ ಹೃದಯ ಕಠಿಣವಾಯಿತು. ಆ ಜನರಿಗೆ ಹೊರಡಲಿಕ್ಕೆ ಅವನು ಅಪ್ಪಣೆ ಕೊಡದೆಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು