Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:6 - ಕನ್ನಡ ಸತ್ಯವೇದವು C.L. Bible (BSI)

6 ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರು ಹೇಳಿದ ಮಾತು ತಪ್ಪಿತೆಂದು ನಾವು ಭಾವಿಸಕೂಡದು. ಯಾಕಂದರೆ ಇಸ್ರಾಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವಾನ್ ಗೊಸ್ಟ್ ದಿವ್ನ್ ಸಾಂಗಲ್ಲೆ ಪುರಾ ಹೊವ್ಕ್ ನಾ ಮನುನ್ ಮಿಯಾ ಸಾಂಗಿನಾ; ಕಶ್ಯಾಕ್ ಮಟ್ಲ್ಯಾರ್ ಇಸ್ರಾಯೆಲಾಚಿ ಸಗ್ಳಿ ಲೊಕಾಬಿ ದೆವಾಚಿ ಲೊಕಾ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:6
14 ತಿಳಿವುಗಳ ಹೋಲಿಕೆ  

ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ಅವರಲ್ಲಿ ಕೆಲವರು ಅಪ್ರಾಮಾಣಿಕರಾಗಿ ನಡೆದುಕೊಂಡಿದ್ದರೆ ಏನಾಯಿತು? ದೇವರ ಪ್ರಾಮಾಣಿಕತನಕ್ಕೆ ಭಂಗಬರಲು ಸಾಧ್ಯವೆ?


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು