Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವಾಚ್ಯಾ ನದ್ರೆತ್ ತೊ ಮೊಟೊ ಮಾನುಸ್ ಹೊತಾ, ಅನಿ ತೊ ವಾಯ್ನ್ ಹೊಂವ್ದಿ, ನಿಶಾ ಹೊತಲೆ ಕಾಯ್ಬಿ ಹೊಂವ್ದಿ ಫಿ ನಾ. ತೊ ಜಲ್ಮುಚ್ಯಾಕಿ ಅದ್ದಿತ್ನಾಚ್ ತೊ ಪವಿತ್ರ್ ಆತ್ಮ್ಯಾನ್ ಭರಲ್ಲೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:15
22 ತಿಳಿವುಗಳ ಹೋಲಿಕೆ  

“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳಿದಿರಿ;


ಆ ದಿನ ಸರ್ವೇಶ್ವರ ಯೆಹೋಶುವನನ್ನು ಇಸ್ರಯೇಲರೆಲ್ಲರ ದೃಷ್ಟಿಯಲ್ಲಿ ಇಷ್ಟು ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ, ಇವನು ಜೀವದಿಂದಿದ್ದ ಕಾಲವೆಲ್ಲ ಗೌರವವುಳ್ಳವರು ಆಗಿದ್ದರು.


ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.


ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.


ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.


ಮಾತೆಯುದರದಿಂದ ಎನ್ನನು ಹೊರಬರಿಸಿದವನು ನೀನು I ನಿಶ್ಚಿಂತೆಯಾ ಕೂಸನು ಆಕೆಯ ಮಡಿಲಲಿ ಇರಿಸಿದವನು ನೀನು II


ಆಸ್ತಿ - ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ. ಸರ್ವಾಧಿಕಾರ, ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ. ಪಟ್ಟ ಪದವಿಗೆ, ಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ.


ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


“ನೀನೂ ನಿನ್ನ ಪುತ್ರರು ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು, ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತ ನಿಯಮ.


ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸವನ್ನು ಕುಡಿಯಲೇಬಾರದು.


ಆ ಮಗುವಿನ ಜನನವು ನಿಮಗೆ ಹರ್ಷಾನಂದವನ್ನು ಉಂಟುಮಾಡುವುದು; ಬಹುಜನಕ್ಕೆ ಸಂತಸವನ್ನು ತರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು