Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:22 - ಕನ್ನಡ ಸತ್ಯವೇದವು C.L. Bible (BSI)

22 ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತಾಡಲಾರದೆ ಇರಲು ಅವರು - ಇವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನವಾಗಿರಬೇಕು ಎಂದು ತಿಳುಕೊಂಡರು. ಅವನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಕರಿಯಾ ದೆವಾಚ್ಯಾ ಗುಡಿತ್ನಾ ಭಾಯ್ರ್ ಯೆಲ್ಲ್ಯಾ ತನ್ನಾ ತೆಕಾ ಲೊಕಾಂಚ್ಯಾಕ್ಡೆ ಬೊಲುಕ್ ಹೊವುಕ್ನಾ, ಹಾತಾನಿ ಸೊನ್ನಿ ಕರುನ್ ತೆನಿ ದಾಕ್ವುಲ್ಯಾನ್ ತೆಕಾ ಬೊಲುಕುಚ್ ಹೊವ್ಕ್ ನಾ.ತನ್ನಾ ದೆವಾಚ್ಯಾ ಗುಡಿತ್ ತೆನಿ ದರ್ಶನ್ ಬಗಟ್ಲ್ಯಾನ್ ಮನುನ್ ಲೊಕಾಕ್ನಿ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:22
8 ತಿಳಿವುಗಳ ಹೋಲಿಕೆ  

“ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?” ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು.


ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:


ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು.


ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.


ಸಿಮೋನಪೇತ್ರನು, “ಯಾರನ್ನು ಕುರಿತು ಹಾಗೆ ಹೇಳುತ್ತಿದ್ದಾರೆಂದು ಕೇಳು,” ಎಂದು ಸನ್ನೆಮಾಡಿದನು.


ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.


ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು.


ತನ್ನ ಯಾಜಕ ಸೇವಾಸರದಿಯು ಮುಗಿದ ನಂತರ ಜಕರೀಯನು ಮನೆಗೆ ಹಿಂದಿರುಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು