Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:3 - ಕನ್ನಡ ಸತ್ಯವೇದವು C.L. Bible (BSI)

3 ನಾನು ಆಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಉಚಿತವೆಂದು ನನಗೂ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚೆಸಾಟ್ನಿ,ಸುರು ಹೊಲ್ಲ್ಯಾಕ್ನಾ ಮಿಯಾಬಿ ಬರೆ ಕರುನ್ ಹೆ ಶಿಕ್ಲೊ ಅನಿ ತುಜ್ಯಾಸಾಟಿ ಎಕಾಚ್ಯಾ ಫಾಟ್ನಾ ಎಕ್ ವಿಶಯ್ ಬರೆ ಕರುನ್ ಪುಸ್ತಕ್ ರುಪಾತ್ ಲಿವ್ನ್ ಥವ್ತಲೆ ಬರೆ,ಮನುನ್ ಮಾಕಾ ದಿಸ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:3
17 ತಿಳಿವುಗಳ ಹೋಲಿಕೆ  

ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.


ಅದಕ್ಕೆ ಪೌಲನು, “ನಾನು ಹುಚ್ಚನಲ್ಲ, ಫೆಸ್ತ ಮಹಾಪ್ರಭೂ, ನಾನು ಆಡುತ್ತಿರುವುದು ತಿಳಿಮನಸ್ಸಿನಿಂದಾಡುವ ಸತ್ಯ.


ಇದನ್ನು ನಾವು ಎಲ್ಲೆಲ್ಲೂ ಯಾವಾಗಲೂ ಪೂರ್ಣ ಕೃತಜ್ಞತೆಯಿಂದ ಸ್ಮರಿಸಿಕೊಳ್ಳುತ್ತೇವೆ.


“ಮಹಾಪ್ರಭುಗಳಾದ ರಾಜ್ಯಪಾಲ ಫೆಲಿಕ್ಸ್ ಅವರ ಸನ್ನಿಧಾನಕ್ಕೆ - ಕ್ಲಾಡಿಯಲೂಸಿಯನು ಮಾಡುವ ಪ್ರಣಾಮಗಳು.


ಅದಕ್ಕೆ ಪೇತ್ರನು ನಡೆದ ವೃತ್ತಾಂತವನ್ನು ಆಮೂಲಾಗ್ರವಾಗಿ ಅವರಿಗೆ ವಿವರಿಸಿದನು:


“ಆದುದರಿಂದ ನನ್ನ ತೀರ್ಮಾನವೇನೆಂದರೆ : ದೇವರ ಕಡೆಗೆ ತಿರುಗುತ್ತಿರುವ ಅನ್ಯಧರ್ಮೀಯರನ್ನು ತೊಂದರೆಗೆ ಈಡುಮಾಡಬಾರದು.


ಸಹೋದರರೇ, ಅಪೊಲೋಸನ ವಿಷಯವಾಗಿ ಹೇಳುವುದಾದರೆ, ಆತನು ಇತರ ಸಹೋದರರೊಡನೆ ನಿಮ್ಮ ಬಳಿಗೆ ಬರಬೇಕೆಂದು ನಾನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ತಕ್ಷಣವೇ ಬರಲು ಆತನಿಗೆ ಮನಸ್ಸಿಲ್ಲ; ಸದವಕಾಶ ದೊರಕಿದಾಗ ಬರುತ್ತಾನೆ.


ಆಕೆ ವಿವಾಹವಾಗದೆ ಹಾಗೇ ಉಳಿದರೆ ಹೆಚ್ಚು ಭಾಗ್ಯವಂತಳು. ಇದು ನನ್ನ ಅಭಿಪ್ರಾಯ. ಆದರೂ ದೇವರ ಆತ್ಮದ ಪ್ರೇರಣೆಯಿಂದ ಇದನ್ನು ಹೇಳುತ್ತಿದ್ದೇನೆ, ಎಂಬುದೇ ನನ್ನ ನಂಬಿಕೆ.


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”


ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು.


ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.


ಉಪದೇಶಕನು ಜ್ಞಾನಿಯಾಗಿದ್ದ; ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದ. ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ, ಕ್ರಮಪಡಿಸಿದ.


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಸತ್ಯವಾದ ಆ ವಚನಗಳು ಎಷ್ಟೋ ಯಥಾರ್ಥವೆಂದು ತಿಳಿದು ನಿನ್ನನ್ನು ಪ್ರಶ್ನಿಸಿದವರಿಗೆ ಅವುಗಳನ್ನು ಅರಿಕೆಮಾಡು.


ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.


ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು