Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:33 - ಕನ್ನಡ ಸತ್ಯವೇದವು C.L. Bible (BSI)

33 ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅನಿ ತೊ ಜಾಕೊಬಾಚ್ಯಾ ಘರಾನ್ಯಾಚ್ಯಾ ಲೊಕಾಂಚೊ ರಾಜಾ ಹೊತಾ; ತೆಚೊ ರಾಜ್ ಕನ್ನಾಚ್ ಸರಿನಾ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:33
28 ತಿಳಿವುಗಳ ಹೋಲಿಕೆ  

ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”


ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.


ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


“ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು