Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:9 - ಕನ್ನಡ ಸತ್ಯವೇದವು C.L. Bible (BSI)

9 ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವದು ಯಾಜಕರ ಮರ್ಯಾದೆಯ ಪ್ರಕಾರ ಅವನ ಪಾಲಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಯಾಜಕಾಂಚ್ಯಾ ಪದ್ದತಿ ಸರ್ಕೆ ದೆವಾಚ್ಯಾ ಗುಡಿತ್ ಧುಪ್ ಘಾಲುಕ್ ಮನುನ್ ಜೆಕರಿಯಾಕ್ ಚಿಟಿಯಾ ಘಾಲುನ್ ಎಚುನ್ ಕಾಡಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:9
10 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.


ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.


ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ.


ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.


ಹೀಗೆ ಇದೆಲ್ಲಾ ವ್ಯವಸ್ಥಿತವಾಗಿರಲು, ಯಾಜಕರು ಮೊದಲನೆಯ ಭಾಗವಾದ ಪವಿತ್ರಸ್ಥಳವನ್ನು ಮಾತ್ರ ಪ್ರವೇಶಿಸಿ, ಅಲ್ಲಿ ದೇವಾರಾಧನೆಯ ವಿಧಿಗಳನ್ನು ನಿರಂತರವಾಗಿ ನೆರವೇರಿಸುತ್ತಿದ್ದರು.


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ಆರೋನನೂ ಅವನ ವಂಶಜರೂ ಸುಗಂಧ ಕಾಣಿಕೆಗಳನ್ನು ಅರ್ಪಿಸುತ್ತಿದ್ದರು. ಬಲಿಪೀಠದ ಮೇಲೆ ಸಮರ್ಪಿಸುವ ಬಲಿಗಳನ್ನು ಅರ್ಪಣೆಮಾಡುತ್ತಿದ್ದರು. ಅತೀ ಪರಿಶುದ್ಧ ಸ್ಥಳದ ಎಲ್ಲ ಆರಾಧನೆಗೂ ಇಸ್ರಯೇಲರ ಕ್ಷಮಾಪಣೆಗಾಗಿ ಸರ್ವೇಶ್ವರ ನೇಮಿಸಿದ ಬಲಿಯರ್ಪಣೆಗಳಿಗೂ ಧೂಪಾರತಿಗೂ ಅವರೇ ಜವಾಬ್ದಾರರು ಆಗಿದ್ದರು. ದೇವರ ಸೇವಕ ಮೋಶೆ ಕೊಟ್ಟ ನಿಯಮಗಳಿಗೆ ಅನುಸಾರವಾಗಿ ಇದೆಲ್ಲವನ್ನೂ ಅವರು ಮಾಡುತ್ತಿದ್ದರು.


ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು