Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:26 - ಕನ್ನಡ ಸತ್ಯವೇದವು C.L. Bible (BSI)

26 ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರಕೊಂಡು ಬರುವದು; ಅವು ಒಳಹೊಕ್ಕು ಅಲ್ಲಿ ವಾಸಮಾಡುವವು; ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ಆ ದೆವ್ವಗಳೆಲ್ಲಾ ಆ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ಆ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ಅಶುದ್ಧಾತ್ಮವು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುತ್ತವೆ. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ತೊ ಗಿರೊ ಪರ್ತುನ್ ಫಾಟಿ ಜಾತಾ, ಅನಿ ಅಪ್ನಾಚ್ಯಾನ್ಕಿ ಬುರ್ಶ್ಯಾ ಸಾತ್ ಗಿರ್‍ಯಾಕ್ನಿ ಘೆವ್ನ್ ಯೆತಾ, ಮಾನಾ ತೆನಿ ಸಗ್ಳೆ ಜಾನಾ, ಥೈ ಯೆವ್ನ್ ರ್‍ಹಾತ್ಯಾತ್. ಅಶೆ ಸಗ್ಳೆ ಹೊವ್ನ್ ಸರಲ್ಲ್ಯಾ ತನ್ನಾ, ತೊ ಮಾನುಸ್ ಅದ್ದಿ ಹೊತ್ತ್ಯಾನ್ಕಿ ಬುರ್ಶ್ಯಾ ಪರಿಸ್ತಿತಿಕ್ ಯೆವ್ನ್ ಪಾವ್ತಾ, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:26
11 ತಿಳಿವುಗಳ ಹೋಲಿಕೆ  

ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.


ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.


ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟವಾಗಿರುವುದನ್ನೂ ಕಾಣುತ್ತದೆ.


ಯೇಸುಸ್ವಾಮಿ ಹೀಗೆ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, “ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!” ಎಂದು ಕೂಗಿ ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು