Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:29 - ಕನ್ನಡ ಸತ್ಯವೇದವು C.L. Bible (BSI)

29 ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: “ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಜನರು ಗುಂಪುಗುಂಪಾಗಿ ಕೂಡಿಬರುತ್ತಿರುವಾಗ ಆತನು ಹೇಳುವದಕ್ಕೆ ತೊಡಗಿದ್ದೇನಂದರೆ - ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಜನರ ಗುಂಪು ದೊಡ್ಡದಾಗುತ್ತಿರಲು ಯೇಸು ಅವರಿಗೆ, “ಈ ಸಂತತಿಯು ಕೆಟ್ಟ ಸಂತತಿಯೇ ಸರಿ! ಇದು ಸೂಚಕಕಾರ್ಯವನ್ನು ನೋಡಬೇಕೆನ್ನುತ್ತದೆ. ಆದರೆ ಯೋನನ ಜೀವಿತದಲ್ಲಾದ ಸೂಚಕಕಾರ್ಯದ ಹೊರತು ಬೇರೆ ಯಾವುದೂ ಇದಕ್ಕೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಜನರು ಗುಂಪುಗುಂಪಾಗಿ ಕೂಡಿಬಂದಿದ್ದಾಗ, ಯೇಸು, “ಇದು ದುಷ್ಟ ಸಂತತಿಯು. ಇದು ಸೂಚಕಕಾರ್ಯವನ್ನು ಹುಡುಕುತ್ತದೆ, ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಲೊಕಾ ಜೆಜುಚ್ಯಾ ಭೊತ್ಯಾನಿ ಯೆವ್ನ್-ಯೆವ್ನ್ ಗೊಳಾ ಹೊತಾನಾ, ಜೆಜುನ್ “ಹ್ಯಾ ಕಾಲಾತ್ಲಿ ಲೊಕಾ ಕವ್ಡಿ ವಾಯ್ಟ್! ತೆನಿ ವಿಚಿತ್ರ್ ಕಾಮ್ ಇಚಾರ್‍ತ್ಯಾತ್. ಖರೆ ಜೊನಾ ಪ್ರವಾದ್ಯಾಚ್ಯಾ ಜಿವನಾತ್ ಹೊಲ್ಲ್ಯಾ ವಿಚಿತ್ರ್ ಕಾಮಾಚ್ಯಾನ್ಕಿ, ಅನಿ ದುಸ್ರೆ ವಿಚಿತ್ರ್ ಕಾಮ್ ಹೆಂಕಾ ಕರುನ್ ದಾಕ್ವುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:29
19 ತಿಳಿವುಗಳ ಹೋಲಿಕೆ  

ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು.


ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ?


ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು.


ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಇದನ್ನಾಲಿಸಿದ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ದುಷ್ಟ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊಂದಿಗಿದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದರು.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ಈ ವಿಷಯದಲ್ಲಿ ಯೆಜೆಕಿಯೇಲನು ನಿಮಗೆ ಮುಂಗುರುತಾಗಿರುವನು. ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ಒಂದು ದಿನ ಅಮಿತ್ತಾಯನ ಮಗನಾದ ಯೋನನಿಗೆ ಸರ್ವೇಶ್ವರಸ್ವಾಮಿಯ ವಾಣಿ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು