Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:42 - ಕನ್ನಡ ಸತ್ಯವೇದವು C.L. Bible (BSI)

42 “ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅಯ್ಯೋ ಫರಿಸಾಯರೇ, ನೀವು ಮರುಗ ಸದಾಪು ಮುಂತಾದ ಸಕಲ ಪಲ್ಯಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ; ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಒತ್ತಟ್ಟಿಗೆ ಬಿಟ್ಟಿದ್ದೀರಿ; ಇವುಗಳನ್ನು ಮಾಡಬೇಕಾಗಿತ್ತು, ಅವುಗಳನ್ನೂ ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಫಾರಿಜೆವಾನೊ ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ತುಮಿ ಧಾ ತ್ಲೊ ಎಕ್ ವಾಟೊ ಮಟ್ಲ್ಯಾರ್, ಪುದಿನಾ, ಅನಿ ಅಸ್ಲ್ಯಾ ತಸ್ಲ್ಯಾ ಬಾರಿ-ಬಾರಿಕ್ಲ್ಯಾ ಝಾಡಾಂಚ್ಯಾ ಪಿಕಾತ್ಲೊ ಸೈತ್ ವಾಟೊ ದೆವಾಕ್ ದಿತ್ಯಾಶಿ, ಖರೆ, ದುಸ್ರ್ಯಾಕ್ನಿ ಬರೆ ಕರ್‍ತಲ್ಯಾಕ್, ಅನಿ ದೆವಾಚೊ ಪ್ರೆಮ್ ಕರ್‍ತಲ್ಯಾಕ್, ತುಮಿ ತುಮ್ಚೆ ಧ್ಯಾನುಚ್ ದಿ ನಾ ಹೊಲ್ಯಾಶಿ. ದುಸ್ರ್ಯಾಕ್ನಿ ಬರೆ ಕರುಂಗೆತ್ ತುಮಿ, ಹೆ, ಅದ್ದಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:42
22 ತಿಳಿವುಗಳ ಹೋಲಿಕೆ  

ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.’


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.


ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು