Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:1 - ಕನ್ನಡ ಸತ್ಯವೇದವು C.L. Bible (BSI)

1 ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತ್ಯಾಚ್ ಎಳಾರ್ ಹಜಾರಾನ್ ಲೊಕಾಂಚೊ ತಾಂಡೊ ಥೈ ಗೊಳಾ ಹೊಲ್ಲೊ. ತೆಚೆಸಾಟ್ನಿ ತಿ ಲೊಕಾ ಎಕಾಮೆಕಾಕ್ನಿ ತುಡ್ವುನ್ ಘೆವ್‍ಲಾಗಲ್ಲಿ. ಜೆಜು ಅದ್ದಿ ಅಪ್ನಾಚ್ಯಾ ಶಿಸಾಕ್ನಿ “ಫಾರಿಜೆವಾಂಚ್ಯಾ ಇಸ್ಟಾಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ- ತಸೆ ಮಟ್ಲ್ಯಾರ್ ತೆಂಚ್ಯಾ ಕುಸ್ಡ್ಯಾಪಾನಾಚ್ಯಾ ವಿಶಯಾತ್ ಮಟ್ಲೊ ಮಿಯಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:1
18 ತಿಳಿವುಗಳ ಹೋಲಿಕೆ  

ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?


ಕಪಟ ಹೃದಯಿಗಳು ಕೋಪಿಷ್ಠರಾಗುವರು ತಮ್ಮನ್ನು ಬಂಧಿಸುವಾಗಲು ಮೊರೆಯಿಡಲು.


ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಅರಸನು ತನ್ನ ಹಸ್ತಕನಾದ ಸರದಾರನನ್ನು ಊರ ದ್ವಾರಪಾಲಕರ ನಾಯಕನನ್ನಾಗಿ ಕಳುಹಿಸಿದ್ದನು. ಅವನು ಜನರ ತುಳಿತಕ್ಕೆ ಸಿಕ್ಕಿ ಸತ್ತನು. ಹೀಗೆ ಆ ದೈವಪುರುಷನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.


ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು.


ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು.


ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು.


ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು