Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:8 - ಕನ್ನಡ ಸತ್ಯವೇದವು C.L. Bible (BSI)

8 “ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ ಮನುಷ್ಯಕುಮಾರನು ಸಹ ಅವನನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಾನು ನಿಮಗೆ ಹೇಳುವುದೇನೆಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಸಗ್ಳ್ಯಾ ಲೊಕಾಂಚ್ಯಾ ಮದ್ದಿ ತುಮಿ ಮಾಜೆ ಮನುನ್ ಸಾಂಗಟಲ್ಲ್ಯಾನೊ, ಮಿಯಾ ತುಮ್ಕಾ ಗೊಸ್ಟ್ ದಿತಾ, ಮಾನ್ಸಾಚೊ ಲೆಕ್‍ಬಿ ದೆವಾಚ್ಯಾ ದುತಾಂಚ್ಯಾ ಇದ್ರಾಕ್ ತುಮಿ ಅಪ್ನಾಚಿ ಲೊಕಾ ಮನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:8
13 ತಿಳಿವುಗಳ ಹೋಲಿಕೆ  

ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಮಾತಾಡುವೆನು ನಿನ್ನ ಆಜ್ಞೆಗಳ ವಿಷಯವಾಗಿ I ಅರಸುಗಳ ಮುಂದೆಯು ನಿಸ್ಸಂಕೋಚವಾಗಿ II


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು