Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:16 - ಕನ್ನಡ ಸತ್ಯವೇದವು C.L. Bible (BSI)

16 ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹಾಗಾದರೆ ಹದಿನೆಂಟು ವರುಷಗಳ ತನಕ ಸೈತಾನನು ಕಟ್ಟಿಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್‍ದಿನದಲ್ಲಿ ಈ ಕಟ್ಟಿನೊಳಗಿಂದ ಬಿಡಿಸಬಾರದೋ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ವಾಸಿಮಾಡಿದ ಈ ಸ್ತ್ರೀಯಾದರೋ ಯೆಹೂದ್ಯಳು. ಸೈತಾನನು ಆಕೆಯನ್ನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು. ಆದ್ದರಿಂದ ಆಕೆಯನ್ನು ಸಬ್ಬತ್‌ದಿನದಂದು ಕಾಯಿಲೆಯಿಂದ ಬಿಡುಗಡೆ ಮಾಡುವುದು ಖಂಡಿತವಾಗಿಯೂ ತಪ್ಪಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅತ್ತಾ ಹಿತ್ತೆ, ಅಬ್ರಾಹಾಮಾಚ್ಯಾ ಘರಾನ್ಯಾತ್ಲ್ಯಾ ಎಕ್ಲಿಕ್ ಸೈತಾನಾನ್ ಅಟ್ರಾ ವರ್ಸಾಕ್ನಾ ಭಾಂದುನ್ ಥವ್ಲ್ಯಾನಾಯ್, ತಿ ಸಬ್ಬತಾಚ್ಯಾ ದಿಸಿ ಸುಟ್ಕಾ ಹೊವ್‍ ನ್ಹಯ್ ಕಾಯ್?” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:16
11 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಅವರಿಗೆ, “ಸಬ್ಬತ್‍ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.


ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಆಗ ಯೇಸು, “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ?


ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.


ಕತ್ತಲು, ಕಗ್ಗತ್ತಲಿಂದವರನು ಹೊರತಂದನು I ಅವರ ಬೇಡಿಬಂಧನಗಳನು ಮುರಿದುಹಾಕಿದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು