Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:19 - ಕನ್ನಡ ಸತ್ಯವೇದವು C.L. Bible (BSI)

19 ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಹಾಕಿದನು; ಅದು ಬೆಳೆದು ಮರವಾಯಿತು; ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಈ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆ ಕಶೆ ಮಟ್ಲ್ಯಾರ್, ಎಕ್ ಮಾನುಸ್ ಎಕ್ ಸಾಸಾವಾಚಿ ಭ್ಹಿಂಯ್ ಘೆತಾ, ಅನಿ ಅಪ್ನಾಚ್ಯಾ ಶೆತಾತ್ ಉಗಾತ್ ಘಾಲ್ತಾ, ತೆ ಝಾಡ್ ಮೊಟೆ ಹೊತಾ, ಅನಿ ಮೊಟೆ ಝಾಡ್ ಹೊತಾ, ಅನಿ ಫಾಂಕ್ರಾ ಯೆವ್ನ್ ತೆಚ್ಯಾ ಟಾಳಿಯಾಕ್ನಿ ಘಂಟೆ ಭಾಂದ್ತ್ಯಾತ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:19
38 ತಿಳಿವುಗಳ ಹೋಲಿಕೆ  

ಅದರ ಎಲೆಗಳು ಚೆಲುವಾಗಿದ್ದವು. ಅದು ಹಣ್ಣುಗಳಿಂದ ತುಂಬಿತ್ತು. ಅದರಿಂದ ಎಲ್ಲಕ್ಕೂ ಆಹಾರ, ವನ್ಯಮೃಗಗಳಿಗೆ ಅದರ ನೆರಳಿನಲ್ಲಿ ಆಶ್ರಯ, ಆಕಾಶದ ಪಕ್ಷಿಗಳಿಗೆ ಅದರ ಕೊಂಬೆಗಳಲ್ಲಿ ನೆಲೆ, ಎಲ್ಲಾ ಪ್ರಾಣಿಗಳಿಗೂ ಅದರಿಂದ ಪೋಷಣೆ ದೊರಕುತ್ತಿತ್ತು.


ಲೋಕದ ಜನರೆಲ್ಲರಿಗೆ ಕಾಣಿಸುತ್ತಿತ್ತು. ಅಂದವಾದ ಎಲೆಗಳನ್ನೂ ಹುಲುಸಾದ ಹಣ್ಣುಗಳನ್ನೂ ಬಿಡುತ್ತಿತ್ತು. ಎಲ್ಲಕ್ಕೂ ಆಹಾರ ಒದಗಿಸುತ್ತಿತ್ತು. ತನ್ನ ನೆರಳನ್ನು ವನ್ಯಮೃಗಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡಿತ್ತು. ಕನಸಿನಲ್ಲಿ ನಿಮಗೆ ತೋರಿದ ಆ ಮರವು ನೀವೇ.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಆ ರೆಂಬೆಗಳಲ್ಲಿ ಗೂಡುಮಾಡಿದ್ದವು ಆಕಾಶದ ಪಕ್ಷಿಗಳೆಲ್ಲವು ಅದರಡಿಯಲಿ ಮರಿಗಳನೀಯುತ್ತಿದ್ದವು ಭೂಜಂತುಗಳೆಲ್ಲವು ಅದರ ನೆರಳನಾಶ್ರಯಿಸುತ್ತಿದ್ದವು ಮಹಾಜನಾಂಗಗಳೆಲ್ಲವು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ತೋಟಗಳಲಿ ವಾಸವಾಗಿರುವವಳೇ, ನನಗೆ ಕೇಳಮಾಡು ನಿನ್ನ ದನಿ ಗೆಳೆಯರು ಕಾದಿದ್ದಾರೆ ಅದಕ್ಕಾಗಿ. ನಲ್ಲೆ :


ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.


ನನ್ನ ಪ್ರಿಯಳು, ನನ್ನ ಮದಲಗಿತ್ತಿ ಸುಭದ್ರವಾದ ಉದ್ಯಾನವನ ಬೇಲಿಯೊಳಗಿನ ಬುಗ್ಗೆ ಮುಚ್ಚಿ ಮುದ್ರಿಸಿದ ಚಿಲುಮೆ.


ಆಗ ಯೇಸುಸ್ವಾಮಿ, “ಸಾಸಿವೆಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.


ಯೇಸುಸ್ವಾಮಿ ತಮ್ಮ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಇನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು