Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:25 - ಕನ್ನಡ ಸತ್ಯವೇದವು C.L. Bible (BSI)

25 ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮನೇಯಜಮಾನನು ಎದ್ದು ಕದಾ ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಕದತಟ್ಟಿ - ಸ್ವಾಮೀ, ನಮಗೆ ತೆರೆಯಿರಿ ಎಂದು ಹೇಳುವದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಘರಾಚೊ ಧನಿ ಉಟ್ತಾ, ಅನಿ ದಾರ್ ಧಾಪ್ತಾ; ತನ್ನಾ ತಿಯಾ ಭಾಯ್ರ್ ಇಬೆ ರ್‍ಹಾವ್ನ್ ದಾರ್ ಬಡ್ವುನ್ “ಧನಿಯಾ ಮಾಕಾ ದಾರ್ ಕಾಡ್” ಮನುನ್ ಇಚಾರ್ಲ್ಯಾರ್. ತನ್ನಾ ತೊ “ತುಮಿ ಖೈತ್ನಾ ಯೆಲ್ಯಾಶಿ ಮನುನ್ ಮಾಕಾ ಗೊತ್ತ್ ನಾ!” ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:25
12 ತಿಳಿವುಗಳ ಹೋಲಿಕೆ  

ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.


ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ.


:ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


ದೇವರು ನೋಹನಿಗೆ ಅಪ್ಪಣೆಕೊಟ್ಟ ಮೇರೆಗೆ, ಗಂಡು ಹೆಣ್ಣಂತೆ ಎಲ್ಲ ಪ್ರಾಣಿಗಳು ಬಂದು ಸೇರಿದವು. ಬಳಿಕ ಸರ್ವೇಶ್ವರ, ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.


ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು