Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:28 - ಕನ್ನಡ ಸತ್ಯವೇದವು C.L. Bible (BSI)

28 ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅಬ್ರಹಾಮ ಇಸಾಕ ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕುವದನ್ನೂ ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನು ನೀವು ನೋಡುವಿರಿ. ಆದರೆ ನಿಮ್ಮನ್ನು ಹೊರಗೆ ಹಾಕಲಾಗುವುದು. ಆಗ ನೀವು ಭಯದಿಂದಲೂ ಕೋಪದಿಂದಲೂ ಕೂಗಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ಕಾಣುವಾಗ, ಅಲ್ಲಿ ನಿಮಗೆ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಶೆ ಅಬ್ರಾಹಾಮ್, ಇಸಾಕ್, ಅನಿ ಜಾಕೊಬ್, ಅನಿ ಸಗ್ಳೆ ಪ್ರವಾದಿ ದೆವಾಚ್ಯಾ ರಾಜಾತ್ ರಾವ್ನ್ ತುಮ್ಕಾ ಭಾಯ್ರ್ ಘಾಟಲ್ಲ್ಯಾ ತನ್ನಾ ತುಮಿ ರಡ್ತ್ಯಾಶಿ, ಅನಿ ದಾತಾ ಚಾವ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:28
15 ತಿಳಿವುಗಳ ಹೋಲಿಕೆ  

ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ.


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.


ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ,” ಎಂದರು ಯೇಸುಸ್ವಾಮಿ.


ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.


ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”


ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು