Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:23 - ಕನ್ನಡ ಸತ್ಯವೇದವು C.L. Bible (BSI)

23 ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತಸೆ ಮನ್ತಾನಾ, ಧನಿಯಾನ್ ಆಳಾಕ್, “ದೆಸಾತ್ಲ್ಯಾ ಸಗ್ಳ್ಯಾ ರಸ್ತ್ಯಾ ವೈನಿ. ಅನಿ ವನಿಯಾತ್ನಿ ಜಾ, ಅನಿ ಶೆತಾಂಚ್ಯಾ ವಾಟಾ ವೈನಿ ಜಾವ್ನ್ ಸಗ್ಳ್ಯಾ ಲೊಕಾಕ್ನಿ ಬಲ್ವುನ್ ಹಾನ್, ಅನಿ ಮಾಜೆ ಸಗ್ಳೆ ಘರ್ ಭರುಂದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:23
37 ತಿಳಿವುಗಳ ಹೋಲಿಕೆ  

ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.”


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು.


ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು;


ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ.


ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!’ ಎಂದು ಸ್ಪಷ್ಟಪಡಿಸಿದ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು