Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:17 - ಕನ್ನಡ ಸತ್ಯವೇದವು C.L. Bible (BSI)

17 ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆಗ ಅವನಿಗೆ ತಾನು ಮಾಡಿದ ಬುದ್ಧಿಹೀನ ಕಾರ್ಯದ ಅರಿವಾಯಿತು. ಅವನು ತನ್ನೊಳಗೆ, ‘ನನ್ನ ತಂದೆಯ ಬಳಿಯಲ್ಲಿರುವ ಸೇವಕರಿಗೆ ಬೇಕಾದಷ್ಟು ಆಹಾರವಿದೆ. ನಾನಾದರೋ ಇಲ್ಲಿ ಊಟವಿಲ್ಲದೆ ಸಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆಗ ಅವನಿಗೆ ಬುದ್ಧಿ ಬಂದು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿಯೂ ಉಳಿಯುವಷ್ಟು ಆಹಾರವಿದೆಯಲ್ಲಾ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಆಕ್ರಿಕ್, ತೆಕಾ ಅರು ಯೆಲಿ, ಅನಿ “ಮಾಜ್ಯಾ ಬಾಬಾಚೆ ಘರಾತ್, ಸಗ್ಳಿ ಆಳಾ, ಜೆವ್ನ್-ಖಾವ್ನ್ ಹುರಿ ಸರ್ಕೆ, ಮಾಜ್ಯಾ ಬಾಬಾಕ್ಡೆ ಹಾಯ್, ಅನಿ ಮಿಯಾ ಹಿತ್ತೆ, ಭುಕೆನ್ ಮರುಲಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:17
19 ತಿಳಿವುಗಳ ಹೋಲಿಕೆ  

ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.


ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು.


ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ನಿದ್ರೆಯಿಂದೆದ್ದವನು ಕನಸನ್ನು ತೃಣೀಕರಿಸುವಂತೆ I ಪ್ರಭು ನೀನೆದ್ದು ಕಡೆಗಣಿಸುವೆ ಅವರನು ಮಾಯೆಯಂತೆ II


ನನ್ನಯ ನಡತೆಯನು ಪರಿಶೋಧಿಸುತ್ತ I ತಿರುಗಿಕೊಂಡೆನು ನಿನ್ನ ಕಟ್ಟಳೆಯತ್ತ II


ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು.


ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.


ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು