Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:28 - ಕನ್ನಡ ಸತ್ಯವೇದವು C.L. Bible (BSI)

28 “ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದನ್ನು ಕೇಳಿ ಅವನಿಗೆ ಸಿಟ್ಟುಬಂದು ಒಳಕ್ಕೆ ಹೋಗಲೊಲ್ಲದೆ ಇದ್ದನು. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಆಗ ಹಿರಿಯ ಮಗನು ಕೋಪಗೊಂಡು ಔತಣಕೂಟಕ್ಕೆ ಹೋಗಲಿಲ್ಲ. ಆಗ ಅವನ ತಂದೆ ಹೊರಗೆ ಬಂದು ಅವನನ್ನು ಒಳಗೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಅದಕ್ಕೆ ಹಿರಿಯ ಮಗನು ಕೋಪಗೊಂಡು ಒಳಗೆ ಹೋಗಲು ಇಷ್ಟಪಡಲಿಲ್ಲ. ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ಥೊರ್‍ಲ್ಯಾ ಭಾವಾಕ್, ಲೈ ರಾಗ್ ಯೆಲೊ, ರಾಗಾನ್ ತೊ, ಘರಾತ್ ಭುತ್ತುರ್ ಜಾವ್ಕುಚ್‍ನಾ. ತೆಚೆಸಾಟ್ನಿ, ತೆಚೊ ಬಾಬಾಚ್‍ ಘರಾತ್ನಾ ಭಾಯ್ರ್ ಯೆಲೊ, ಅನಿ ತೆಕಾ ಘರಾತ್ ಭುತ್ತುರ್ ಬಲ್ವುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:28
25 ತಿಳಿವುಗಳ ಹೋಲಿಕೆ  

ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು.


ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.


ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.


ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.


ದಾವೀದನು ಜನರ ಸಂಗಡ ಹೀಗೆ ಮಾತಾಡುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿದನು. ದಾವೀದನ ಮೇಲೆ ಅವನು ಸಿಟ್ಟುಗೊಂಡು, “ನೀನು ಇಲ್ಲಿಗೆ ಬಂದುದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದೆ? ನಿನ್ನ ಸೊಕ್ಕು, ತುಂಟತನ ನನಗೆ ಗೊತ್ತಿದೆ. ನೀನು ಕದನ-ಕುಚೇಷ್ಟೆ ನೋಡಬಂದಿರುವೆಯಷ್ಟೇ,” ಎಂದು ಗದರಿಸಿದನು.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಹಾಗೆಂದ ಮೇಲೆ ಇಸ್ರಯೇಲರು ಆ ಶುಭಸಂದೇಶವನ್ನು ಅರ್ಥಮಾಡಿಕೊಳ್ಳಲಿಲ್ಲ. ಎನ್ನೋಣವೆ? ಮೊದಲನೆಯದಾಗಿ, ಮೋಶೆಯ ಮಾತಿನಲ್ಲಿ ಉತ್ತರಿಸುವುದಾದರೆ: “ ‘ಜನಾಂಗ’ ಎನಿಸಿಕೊಳ್ಳದವರನ್ನು ನೋಡಿ ನೀವು ಅಸೂಯೆಪಡುವಂತೆ ಮಾಡುತ್ತೇನೆ; ಮತಿಹೀನರೆನಿಸಿಕೊಂಡ ಜನಾಂಗವನ್ನು ನೋಡಿ ನೀವು ಕೆರಳುವಂತೆ ಮಾಡುತ್ತೇನೆ.”


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ,


ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಪ್ರಾಣಿಯನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ,’ ಎಂದು ಆಳು ತಿಳಿಸಿದ.


ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ.


ರೇಕಾಬನ ಮಗ ಯೋನಾದಾಬನ ಸಂತಾನದವರು ತಮ್ಮ ಪೂರ್ವಜರು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು