Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:10 - ಕನ್ನಡ ಸತ್ಯವೇದವು C.L. Bible (BSI)

10 ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು; ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾದವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿರುವವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿರುವನು. ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಸ್ವಲ್ಪವಾದದ್ದರಲ್ಲಿ ನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ನಂಬಿಗಸ್ತರಾಗಿರುವರು ಮತ್ತು ಸ್ವಲ್ಪವಾದದ್ದರಲ್ಲಿ ಅಪನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ಅಪನಂಬಿಗಸ್ತರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನ್ ಬಾರಿಕ್ಲ್ಯಾ ವಿಶಯಾತ್ನಿ ವಿಶ್ವಾಸಾನ್ ರ್‍ಹಾತಾ; ತೊ ಮೊಟ್ಯಾ ವಿಶಯಾತ್ನಿಬಿ ವಿಶ್ವಾಸಾನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:10
9 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ.


ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ.


ದೇವಮಂದಿರ ಸೇವೆಯಲ್ಲಿ ಮೋಶೆ ಪ್ರಾಮಾಣಿಕನಾಗಿದ್ದಂತೆಯೇ ಯೇಸುಸ್ವಾಮಿ ತಮ್ಮನ್ನು ನೇಮಿಸಿದವರಿಗೆ ಪ್ರಾಮಾಣಿಕರಾಗಿದ್ದರು.


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


ಯೂದನು ಅದನ್ನು ತೆಗೆದುಕೊಂಡದ್ದೇ ತಡ, ಸೈತಾನನು ಅವನನ್ನು ಹೊಕ್ಕನು.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


“ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು