Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:7 - ಕನ್ನಡ ಸತ್ಯವೇದವು C.L. Bible (BSI)

7 “ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮಲ್ಲಿ ಯಾವನಿಗಾದರೂ ಉಳುವ ಅಥವಾ ಕುರಿಮೇಯಿಸುವ ಆಳಿರಲಾಗಿ ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ - ನೀನು ತಟ್ಟನೆ ಬಂದು ಊಟಕ್ಕೆ ಕೂತುಕೋ ಎಂದು ಹೇಳಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ‘ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಕೆಲಸದವನಿರಲಾಗಿ, ಅವನು ಹೊಲದ ಕೆಲಸ ಅಥವಾ ಕುರಿ ಮೇಯಿಸಿ ಮನೆಗೆ ಬಂದ ಕೂಡಲೇ ಯಜಮಾನನು ಕೆಲಸದವನಿಗೆ, ‘ಬಾ ಊಟಕ್ಕೆ ಕುಳಿತುಕೋ,’ ಎಂದು ಹೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ತುಮ್ಚೊ ಎಕ್ ಆಳ್ ಮನುನ್ ಚಿಂತುವಾ, ಅನಿ ತೊ ಶೆತಾತ್ ನಾಂಗ್ರುಕ್ ನಾಹೊಲ್ಯಾರ್, ಬಕ್ರ್ಯಾಕ್ನಿ ರಾಕುಕ್ ಜಾತಾ, ತೊ ಶೆತಾಕ್ನಾ ಯೆಲ್ಲ್ಯಾ ತನ್ನಾ ತೆಕಾ ತುಮಿ ಲಗ್ಗುನಾ ಯೆ, ಅನಿ ಜೆವಾನ್ ಕರ್ ಮನ್ತ್ಯಾಶಿ ಕಾಯ್?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:7
6 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನಿಮ್ಮಲ್ಲಿ ಒಬ್ಬನಿಗೆ ಒಂದೇ ಒಂದು ಕುರಿಯಿದೆ ಎನ್ನೋಣ. ಸಬ್ಬತ್ ದಿನ ಅದು ಗುಣಿಯಲ್ಲಿ ಬಿದ್ದುಹೋಯಿತು ಎನ್ನೋಣ; ಆ ದಿನ ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?


ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?


ಅನಂತರ, “ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್‍ದಿನವಾಗಿದ್ದರೂ ನೀವು ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?” ಎಂದು ಕೇಳಿದರು.


ಆಗ ಯೇಸುಸ್ವಾಮಿ, “ಸಾಸಿವೆಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.


ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ?


ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು