Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:9 - ಕನ್ನಡ ಸತ್ಯವೇದವು C.L. Bible (BSI)

9 ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ಉದಾಸೀನಮಾಡುವಂಥ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಪ್ನಿ ಬರೆ, ಅನಿ ಹುರಲ್ಲಿ ಸಗ್ಳಿ ಲೊಕಾ ವಾಯ್ಟ್ ಮನುನ್ ಯವ್ಜುನ್ಗೆತ್ ರ್‍ಹಾತಲ್ಯಾ ಲೊಕಾಕ್ನಿ ಜೆಜುನ್, ಹಿ, ಕಾನಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:9
22 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.


ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ?


ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.


ಧರ್ಮಶಾಸ್ತ್ರದ ಅರಿವಿಲ್ಲದೆ ಒಮ್ಮೆ ನಾನು ಜೀವಿಸುತ್ತಿದ್ದೆನು; ಆಜ್ಞೆ ಎಂಬುದು ತಲೆದೋರಿದ ಕೂಡಲೇ ಪಾಪಕ್ಕೆ ಜೀವ ಬಂದಿತು.


ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.


ಆಗ ಅಧಿಕಾರಿಗಳು ಅವನನ್ನು ಶಪಿಸಿದರು. “ನೀನೇ ಅವನ ಶಿಷ್ಯ, ನಾವು ಮೋಶೆಯ ಶಿಷ್ಯರು.


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.


ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸಬಾರದು; ಸಸ್ಯಾಹಾರಿಯು ಮಾಂಸಾಹಾರಿಯನ್ನು ದೋಷಿಯೆಂದು ತೀರ್ಪುಕೊಡಬಾರದು. ಏಕೆಂದರೆ, ಇಬ್ಬರೂ ದೇವರಿಂದ ಅಂಗೀಕೃತರು.


ಏಳನೆಯ ದಿನದಲ್ಲಿ ಯಾಜಕನು ನೋಡುವಾಗ ಆ ಇಸುಬು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆಹೋದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು