Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:13 - ಕನ್ನಡ ಸತ್ಯವೇದವು C.L. Bible (BSI)

13 ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13-14 ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಫಕ್ಕನೆ ಆ ದೂತನ ಸಂಗಡ ಪರಲೋಕಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಕ್ಷಣವೇ ಆ ದೂತನ ಸಂಗಡ ಇದ್ದ ಪರಲೋಕ ಸೈನ್ಯದ ಸಮೂಹವು ದೇವರನ್ನು ಕೊಂಡಾಡುತ್ತಾ ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಎಗ್ದಮ್, ಸರ್‍ಗಾ ವೈಲ್ಯಾ ದೆವಾಚ್ಯಾ ದುತಾಂಚೊ ತಾಂಡೊ “ದೆವಾಕ್ ಆರಾದನ್” ಕರುಕ್ ಮನುನ್ ಗಿತ್ ಮನ್ತಲೊ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:13
18 ತಿಳಿವುಗಳ ಹೋಲಿಕೆ  

ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಆತನ ಸಮಸ್ತ ದೂತರೇ, ಸ್ತುತಿಸಿ ಆತನನು I ಆತನ ಎಲ್ಲಾ ಗಣಗಳೇ, ಹೊಗಳಿ ಆತನನು II


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಭೂಮಿಗೆ ಮೂಲೆಗಲ್ಲನು ಹಾಕಿದವನಾರು? ಅದರ ಅಡಿಗಲ್ಲು ಯಾವುದರ ಮೇಲೆ ನಿಂತಿದೆ?”


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಆ ರಾತ್ರಿ ಅವನಿಗೆ ಒಂದು ಕನಸು ಬಿತ್ತು, ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೆಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.


ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಇಗೋ, ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು