Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:26 - ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವದಕ್ಕಿಂತ ಮುಂಚೆ ನೀನು ಸಾಯುವದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ, ಅವನು ಕರ್ತದೇವರು ಕಳುಹಿಸಲಿರುವ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ಮರಣ ಹೊಂದುವುದಿಲ್ಲವೆಂದು ಪವಿತ್ರಾತ್ಮನಿಂದ ಅವನಿಗೆ ಪ್ರಕಟನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅನಿ ಸರ್ವೆಸ್ವರಾನ್ ಧಾಡ್ತಾ ಮನುನ್ ಗೊಸ್ಟ್ ದಿಲ್ಲ್ಯಾ ಮೆಸ್ಸಿಯಾಕ್ ಬಗಟ್ಲ್ಯಾ ಸಿವಾಯ್ ತಿಯಾ ಮರಿನೆ ಮನುನ್ ಪವಿತ್ರ್ ಆತ್ಮ್ಯಾನ್ ತೆಕಾ ಸಾಂಗಟಲ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:26
20 ತಿಳಿವುಗಳ ಹೋಲಿಕೆ  

ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.


“ಇಲ್ಲಿರುವವರಲ್ಲಿ ಕೆಲವರು, ದೇವರ ಸಾಮ್ರಾಜ್ಯವನ್ನು ನೋಡದೆ ಸಾವನ್ನು ಸವಿಯುವುದಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


“ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು.


ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.


“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು