Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:32 - ಕನ್ನಡ ಸತ್ಯವೇದವು C.L. Bible (BSI)

32 ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ತುಜಿ ಕುಶಿ ಕಾಯ್ ಮನುನ್ ದಾಕ್ವುತಲೊ ಉಜ್ವೊಡ್ ಅನಿ ತುಜ್ಯಾ ಇಸ್ರಾಯೆಲಾಚ್ಯಾ ಲೊಕಾಕ್ನಿ ತೊ ಮಹಿಮಾ ಹಾನ್ತಾ”. ತೆಚ್ಯಾ ಸಾಟ್ನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:32
22 ತಿಳಿವುಗಳ ಹೋಲಿಕೆ  

ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.”


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’


ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರು ಬದಲಾಯಿಸಿಕೊಂಡಿತೋ? ಆದರೆ ನನ್ನ ಜನ, ತಮ್ಮ ಮಹಿಮೆಯಾದ ನನ್ನನ್ನು ತೊರೆದು ನಿರರ್ಥಕವಾದುವುಗಳನ್ನು ಆರಿಸಿಕೊಂಡಿದ್ದಾರೆ!


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.


ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ : ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.


ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು