Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:7 - ಕನ್ನಡ ಸತ್ಯವೇದವು C.L. Bible (BSI)

7 ಆಕೆ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಿನಿ ಅಪ್ನಾಚ್ಯಾ ಪಯ್ಲೆಚ್ಯಾ ಪೊರಾಕ್ ಜಲಮ್ ದಿಲಿನ್. ತೆಂಕಾ ರ್‍ಹಾವ್ಕ್ ಎಕ್ ಘರಾತ್ ಸೈತ್ ಜಾಗೊ ಗಾವುಕ್‍ನತ್ತೊ. ಮರಿನ್ ಪೊರಾಕ್ ಫಾಳಿಚ್ಯಾ ತುಕ್ಡ್ಯಾತ್ನಿ ಲಪ್ಟುನ್ ಗೊದ್ನಿತ್ ನಿಜ್ವುಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:7
16 ತಿಳಿವುಗಳ ಹೋಲಿಕೆ  

ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ.


ಈಜಿಪ್ಟಿಗೆ ಹೋಗುವ ದಾರಿಯಲ್ಲಿದ್ದ ಛತ್ರವೊಂದರಲ್ಲಿ ಸರ್ವೇಶ್ವರ ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದರು.


ರಾತ್ರಿಗೆ ಒಂದು ಚಾವಡಿಯಲ್ಲಿ ಇಳಿದುಕೊಂಡರು. ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಧಾನ್ಯಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದನು. ತಾನು ತಂದಿದ್ದ ಹಣ ಅದರ ಬಾಯಲ್ಲೇ ಇತ್ತು.


ನಾವು ಹೊರಟುಹೋದ ನಂತರ ಚಾವಡಿಯೊಂದರಲ್ಲಿ ಇಳಿದುಕೊಂಡೆವು. ಅಲ್ಲಿ ನಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿ ಒಬ್ಬನ ಹಣ, ತೂಕ ಕಿಂಚಿತ್ತೂ ಕಡಿಮೆಯಿಲ್ಲದೆ, ಅವನವನ ಚೀಲದಲ್ಲೇ ಇತ್ತು. ಅದನ್ನು ವಾಪಸ್ಸು ತಂದಿದ್ದೇವೆ.


ಹೀಗೆ ಅವರು ಬೆತ್ಲೆಹೇಮಿನಲ್ಲಿ ಇದ್ದಾಗ, ಮರಿಯಳಿಗೆ ಪ್ರಸವಕಾಲ ಸಮೀಪಿಸಿತು.


ಅದೇ ನಾಡಿನಲ್ಲಿ ಕೆಲವು ಕುರುಬರು ಹೊಲಗಳಲ್ಲಿದ್ದುಕೊಂಡು ರಾತ್ರಿಯಲ್ಲಿ ಕುರಿಮಂದೆಗಳನ್ನು ಕಾಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು