Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:13 - ಕನ್ನಡ ಸತ್ಯವೇದವು C.L. Bible (BSI)

13 ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಆ ದ್ರಾಕ್ಷೆಯ ತೋಟದ ಧಣಿಯು - ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಆಗ ತೋಟದ ಯಜಮಾನನು, ‘ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆಗ ದ್ರಾಕ್ಷಿಯ ತೋಟದ ಯಜಮಾನನು, ‘ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿಸುವೆನು, ಬಹುಶಃ ಅವರು ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ತೊ ದರಾಕ್ಷಿಚ್ಯಾ ಮಳ್ಯಾಚೊ ಮಾಲಿಕ್ “ಮಿಯಾ ಕಾಯ್ ಕರು? ಮಿಯಾ ಮಾಜ್ಯಾ ಅಪುರ್‍ಬಾಯೆಚ್ಯಾ ಎಕ್ಲ್ಯಾಚ್ ಲೆಕಾಕ್ ಧಾಡುನ್ ದಿತಾ, ತೆಚೆ ತೆನಿ ಆಯಿಕ್ತಿಲ್!” ಮಟ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:13
19 ತಿಳಿವುಗಳ ಹೋಲಿಕೆ  

ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.


ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.


ಅದರೊಳಗಿಂದ, “ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ,” ಎಂಬ ವಾಣಿ ಕೇಳಿಸಿತು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


“ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;


ಯಜಮಾನ ಮೂರನೆಯವನನ್ನು ಕಳುಹಿಸಿದ. ಇವನನ್ನೂ ಚೆನ್ನಾಗಿ ಥಳಿಸಿ, ಗಾಯಗೊಳಿಸಿ, ಹೊರಕ್ಕೆ ದಬ್ಬಿದರು.


ಆದರೆ ಗೇಣಿದಾರರು ಯಜಮಾನನ ಮಗನನ್ನು ಕಂಡದ್ದೇ ತಡ, ‘ತೋಟಕ್ಕೆ ಇವನೇ ಉತ್ತರಾಧಿಕಾರಿ. ಇವನನ್ನು ಮುಗಿಸಿಬಿಡೋಣ; ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು