Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:17 - ಕನ್ನಡ ಸತ್ಯವೇದವು C.L. Bible (BSI)

17 ಇದನ್ನು ಜನರು ಕೇಳಿದ್ದೇ, “ಅಯ್ಯೋ, ಹಾಗೆ ಎಂದಿಗೂ ಸಂಭವಿಸದಿರಲಿ!” ಎಂದರು. ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ; ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.’ ಎಂದು ಪವಿತ್ರಗ್ರಂಥದಲ್ಲಿ ಹೇಳಿರುವುದರ ಅರ್ಥ ಆದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದನ್ನು ಜನರು ಕೇಳಿ - ಹಾಗಾಗಬಾರದು ಅಂದರು. ಆದರೆ ಆತನು ಅವರನ್ನು ದೃಷ್ಟಿಸಿ ನೋಡಿ - ಹಾಗಾದರೆ ಮನೇ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರುವ ಮಾತೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, “ಹಾಗಾದರೆ, ‘ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು’ ಎಂಬ ವಚನದ ಅರ್ಥವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಪವಿತ್ರ ವೇದದಲ್ಲಿ ಬರೆದಿರುವುದರ ಅರ್ಥ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಜುನ್ ತೆಂಚೆಕ್ಡೆ ಬಗಟ್ಲ್ಯಾನ್, ಅನಿ ತೆಂಕಾ, ಭಾಂದ್ತಲ್ಯಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊಚ್, ಸಗ್ಳ್ಯಾನ್ಕಿ ಗರ್ಜೆಚೊ ಗುಂಡೊ ಹೊಲೊ. ಮನುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾಚೊ ಅರ್ತ್‍ ಕಾಯ್ ತರ್? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:17
17 ತಿಳಿವುಗಳ ಹೋಲಿಕೆ  

ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ.


ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?


ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು.


ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಆಗ ಪ್ರಭು ಯೇಸು ಹಿಂದಿರುಗಿ ಪೇತ್ರನನ್ನು ದಿಟ್ಟಿಸಿ ನೋಡಿದರು. “ಈ ದಿನ ಕೋಳಿ ಕೂಗುವ ಮೊದಲೇ, ‘ನಾನು ಆತನನ್ನು ಅರಿಯೆನು,’ ಎಂದು ನನ್ನನ್ನು ಮೂರು ಬಾರಿ ನಿರಾಕರಿಸುವೆ,” ಎಂದು ಯೇಸು ನುಡಿದಿದ್ದ ಮಾತುಗಳು ಪೇತ್ರನ ನೆನಪಿಗೆ ಬಂದುವು.


ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ!” ಎಂದರು.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ಆ ಕುಲದಿಂದಲೇ ಮೂಲೆಗಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲುಗಳು ಬರುವುವು. ಆ ಕುಲದಿಂದಲೇ ಸಕಲ ಅಧಿಕಾರಿಗಳು ಹೊರಬರುವರು.


ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.


ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು