Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:47 - ಕನ್ನಡ ಸತ್ಯವೇದವು C.L. Bible (BSI)

47 ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ಜಪತಪಗಳನ್ನು ದೀರ್ಘವಾಗಿ ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ತೆನಿ ಲಜಿನಸ್ತಾನಾ ಘೊಮರಲ್ಲ್ಯಾ ಬಾಯ್ಕೊಮನ್ಸಾಂಚೊ ಫಾಯ್ದೊ ಕಾಡುನ್ ಘೆವ್ನ್ ತೆಂಚಿ ಘರಾ ಲುಟ್ತ್ಯಾತ್, ಅನಿ ಲಾಂಬ್-ಲಾಂಬ್ ಮಾಗ್ನಿಯಾ ಕರುನ್ ಅಪ್ನಿ ಬರೆ ಮನುನ್ ದಾಕ್ವುತ್ಯಾತ್! ತೆಂಕಾ ಎಗ್ದಮ್ ಕಟಿನ್ ಶಿಕ್ಷಾ ರ್‍ಹಾತಾ!” ಮನುನ್ ಸಾಂಗಟ್ಲ್ಯಾನ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:47
23 ತಿಳಿವುಗಳ ಹೋಲಿಕೆ  

ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.


ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಆದರೂ ನೀವು ಒಳಿತನ್ನು ದ್ವೇಷಿಸುತ್ತೀರಿ. ಕೆಟ್ಟದ್ದನ್ನು ಬಯಸುತ್ತೀರಿ. ನನ್ನ ಜನರ ಚರ್ಮವನ್ನು ಜೀವಸಹಿತ ಸುಲಿಯುತ್ತೀರಿ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತಿನ್ನುತ್ತೀರಿ.


ಅದಕ್ಕೆ ಸರ್ವೇಶ್ವರ: “ಇತ್ತೀಚೆಗೆ ನನ್ನ ಜನರಿಗೆ ನೀವೇ ಶತ್ರುಗಳು. ಜಗಳಮಾಡಲು ಒಪ್ಪದೆ, ಸಮಾಧಾನದಿಂದ ತಿರುಗಾಡುವರ ಮೇಲಂಗಿಯನ್ನು ಕಸಿದುಕೊಳ್ಳುತ್ತೀರಿ.


ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತಿ ಕಠಿಣವಾದ ದಂಡನೆಗೆ ಗುರಿಯಾಗುವಿರಿ).


ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು