Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:15 - ಕನ್ನಡ ಸತ್ಯವೇದವು C.L. Bible (BSI)

15 ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಕಾ ,ಶಾನ್‍ಪಾನಾಚ್ಯಾ ಗೊಸ್ಟಿಯಾ ದಿತಾ, ಅನಿ ತುಮಿ ಬೊಲಲ್ಲ್ಯಾಕ್, ದುಸ್ಮಾನಾನಿ ಕೊನ್ಬಿ ಹುರ್‍ಪಾಟಿ ಬೊಲುಕುಚ್ ವಾಟ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:15
17 ತಿಳಿವುಗಳ ಹೋಲಿಕೆ  

ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.


ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ಅದಕ್ಕೆ ಅಗ್ರಿಪ್ಪನು, “ಇಷ್ಟು ಅಲ್ಪಕಾಲದಲ್ಲೇ ನನ್ನನ್ನು ಕ್ರೈಸ್ತನನ್ನಾಗಿ ಮಾಡಬೇಕೆಂದು ಇಚ್ಛಿಸುತ್ತೀಯಾ?’ ಎಂದನು.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


“ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.


ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು